ಆ್ಯಪ್ನಗರ

ನೆರೆ ಪರಿಹಾರ ವಿಳಂಬ, ಸರಕಾರದ ವಿರುದ್ಧ ಜನಾಂದೋಲನಕ್ಕೆ ಕಾಂಗ್ರೆಸ್‌ ನಿರ್ಧಾರ

ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್‌ ಜೊತೆ ಪಕ್ಷ ದೃಢವಾಗಿ ನಿಲ್ಲುವುದು, ನೆರೆ ಪರಿಹಾರಕ್ಕೆ ವಿಳಂಬ ಮಾಡುತ್ತಿರುವು ರಾಜ್ಯ ಸರಕಾರದ ವಿರುದ್ಧ ಆಂದೋಲನ ರೂಪಿಸುವುದೂ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

Vijaya Karnataka Web 18 Sep 2019, 3:13 pm
ಬೆಂಗಳೂರು: ನೆರೆ ಪರಿಹಾರದಲ್ಲಿ ವಿಳಂಬ, ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್‌ ಬಂಧನ ಮೊದಲಾದ ಬೆಳವಣಿಗೆಗಳ ನಡುವೆ ಇಂದು ಮಹತ್ವದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು.
Vijaya Karnataka Web Congress legislative party meeting


ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್‌ ಜೊತೆ ಪಕ್ಷ ದೃಢವಾಗಿ ನಿಲ್ಲುವುದು, ನೆರೆ ಪರಿಹಾರಕ್ಕೆ ವಿಳಂಬ ಮಾಡುತ್ತಿರುವು ರಾಜ್ಯ ಸರಕಾರದ ವಿರುದ್ಧ ಆಂದೋಲನ ರೂಪಿಸುವುದೂ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಸಭೆಯ ನಿರ್ಣಯಗಳು ಈ ಕೆಳಗಿನಂತಿವೆ,

  • ಪ್ರವಾಹ ಮತ್ತು ಬರ ಪೀಡಿತರಿಗೆ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಲು ಕ್ರಮಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಲು ತೀರ್ಮಾನಿಸಲಾಗಿದೆ.
  • ಪ್ರವಾಹ ಮತ್ತು ಬರ ಪೀಡಿತರಿಗೆ ರಾಜ್ಯ ಸರಕಾರವು ಕೂಡಲೆ ಪರಿಹಾರವನ್ನು ನೀಡುವಂತೆ ಆಗ್ರಹಿಸಲು ಪ್ರದೇಶವಾರು ಆಂದೋಲನ ರೂಪಿಸಲು ನಿರ್ಧರಿಸಲಾಗಿದೆ.
  • ಬರ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ರಾಜ್ಯದ ರೈತಾಪಿ ಜನರು ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ಆದಷ್ಟು ಬೇಗ ಮನ್ನಾ ಮಾಡುವಂತೆ ಸರಕಾರವನ್ನು ಒತ್ತಾಯಿಸುವ ನಿರ್ಧಾರಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಬಂದಿದೆ.
  • ಪ್ರವಾಹ ಮತ್ತು ಬರ ಪರಿಸ್ಥಿತಿಯ ಚರ್ಚೆಗೆ ಕೂಡಲೇ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಕರೆಯುವಂತೆ ಸರಕಾರದ ಮೇಲೆ ಒತ್ತಡ ಹೇರಲು ತೀರ್ಮಾನವನ್ನು ಕಾಂಗ್ರೆಸ್‌ ತೆಗೆದುಕೊಂಡಿದೆ.
  • ಬರ ಪೀಡಿತ ತಾಲೂಕು ಕೂಡಲೇ ಘೋಷಣೆ ಮಾಡುವಂತೆ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಲಾಗಿದೆ.
  • ಪ್ರಮುಖವಾಗಿ ಪಕ್ಷದ ಹಿರಿಯ ನಾಯಕ ಡಿ.ಕೆ. ಶಿವಕುಮಾರ್‌ ವಿರುದ್ಧ ದ್ವೇಷ ರಾಜಕಾರಣ ನಡೆಸುತ್ತಿರುವ ಬಿಜೆಪಿಯ ನಿಲುವನ್ನು ತೀವ್ರವಾಗಿ ಸಭೆ ಖಂಡಿಸಿದ್ದಲ್ಲದೆ, ಅವರ ಜೊತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷ ಮತ್ತು ಪಕ್ಷ ಸದಾ ಇರುತ್ತದೆ ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಈ ನಿರ್ಣಯವನ್ನು ಕಾಂಗ್ರೆಸ್‌ ಯಾವ ರೀತಿ ಜಾರಿಗೆ ತರಲಿದೆ ಎಂಬುದನ್ನು ನೋಡಬೇಕಿದೆ. ಯಾವ ಸ್ವರೂಪದಲ್ಲಿ ಕೈ ಪಾಳಯ ಆಂದೋಲನ ನಡೆಸಲಿದೆ ಎಂಬುದಕ್ಕೆ ಮುಂದಿನ ದಿನಗಳು ಸಾಕ್ಷಿಯಾಗಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ