ಆ್ಯಪ್ನಗರ

ದೇವರಬೀಸನಹಳ್ಳಿ ಡಿನೋಟಿಫಿಕೇಷನ್‌ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್‌ಗೆ

ದೇವರಬೀಸನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷದ ನಾಯಕ ಬಿಎಸ್‌...

Vijaya Karnataka 31 Jan 2019, 5:00 am
ಬೆಂಗಳೂರು: ದೇವರಬೀಸನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web 45


ನಗರದ 81ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಮುಂದೆ 2013ರಲ್ಲಿ ವಾಸುದೇವರೆಡ್ಡಿ ಅವರು ಹೂಡಿದ್ದ ಪ್ರಕರಣ ಹಾಗೂ ಆ ನಂತರದ ಎಫ್‌ಐಅರ್‌ ರದ್ದು ಮಾಡುವಂತೆ ಕೋರಿದ್ದಾರೆ. ಕೆಐಎಡಿಬಿ 2004ರ ಅವಧಿಯಲ್ಲಿ ದೇವರಬೀಸನಹಳ್ಳಿ ಸುತ್ತಮುತ್ತ ಕೈಗಾರಿಕಾ ಉದ್ದೇಶದಿಂದ ಸುಮಾರು 500 ಎಕರೆ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆ ನಂತರ ಕೇವಲ 434ಎಕರೆಗೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಯಡಿಯೂರಪ್ಪ ಡಿಸಿಎಂ ಆಗಿದ್ದ ಸಮಯದಲ್ಲಿ 4ಎಕರೆ 30 ಗುಂಟೆ ಭೂಮಿ ಡಿನೋಟಿಫೈ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿತ್ತು. ಇದೇ ಪ್ರಕರಣ ಕುರಿತು ಸಚಿವ ಆರ್‌.ವಿ. ದೇಶಪಾಂಡೆ ವಿರುದ್ಧವೂ ದಾಖಲಾಗಿದ್ದ ಖಾಸಗಿ ದೂರು 2015ರಲ್ಲಿಯೇ ರದ್ದುಗೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ