ಆ್ಯಪ್ನಗರ

ಖಾತೆ ಹಂಚಿಕೆಯಲ್ಲಿ ಎಚ್‌ಡಿಡಿ ಮಧ್ಯ ಪ್ರವೇಶ ಇಲ್ಲ: ಕುಮಾರಸ್ವಾಮಿ

ಡಿ.ಕೆ. ಶಿವಕುಮಾರ್ ಆಸೆಯಂತೆ ಇಂಧನ ಖಾತೆ ಅವರಿಗೆ ಸಿಗದಿರಲು ದೇವೇಗೌಡ ಕಾರಣರಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka Web 2 Jun 2018, 2:12 pm
ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ದೇವೇಗೌಡರ ಮಧ್ಯಪ್ರವೇಶ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದೆ. ಡಿ.ಕೆ. ಶಿವಕುಮಾರ್ ಆಸೆಯಂತೆ ಇಂಧನ ಖಾತೆ ಅವರಿಗೆ ಸಿಗದಿರಲು ದೇವೇಗೌಡ ಕಾರಣರಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web kumaraswamy2


ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಕೇಂದ್ರ ಸರಕಾರದ ಅಧಿಸೂಚನೆ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ರಾಜ್ಯದ ನಿಲುವು ಪ್ರಕಟಿಸುವುದಾಗಿ ಹೇಳಿದರು.

ಬಜೆಟ್ ಮಂಡನೆ ಹಾಗೂ ಜಂಟಿ ಅಧಿವೇಶನಕ್ಕೆ ಸದ್ಯದಲ್ಲೇ ದಿನಾಂಕ ನಿಗದಿಯಾಗಲಿದೆ. ಮುಂದಿನ ಎರಡು, ಮೂರು ದಿನಗಳಲ್ಲಿ ಬಜೆಟ್ ಸಿದ್ದತೆ ಪ್ರಕ್ರಿಯೆ ಆರಂಭಿಸುವೆ ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ