ಆ್ಯಪ್ನಗರ

ದೇವೇಗೌಡ ನಿವಾಸಕ್ಕೆ ಇಂದು ಚಂದ್ರಬಾಬು ನಾಯ್ಡು

ಮುಂಬರುವ ಸಾರ್ವತ್ರಿಕ ಚುನಾವಣೆಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಪ್ರಾದೇಶಿಕ ಶಕ್ತಿಗಳ ಮಧ್ಯೆ ಸಮನ್ವಯ ಗಟ್ಟಿಗೊಳಿಸುವ ...

Vijaya Karnataka 8 Nov 2018, 5:00 am
ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಪ್ರಾದೇಶಿಕ ಶಕ್ತಿಗಳ ಮಧ್ಯೆ ಸಮನ್ವಯ ಗಟ್ಟಿಗೊಳಿಸುವ ಪ್ರಯತ್ನವಾಗಿ ಆಂಧ್ರಪ್ರದೇಶ ಸಿಎಂ ಹಾಗೂ ಟಿಡಿಪಿ ನಾಯಕ ಎನ್‌.ಚಂದ್ರಬಾಬು ನಾಯ್ಡು ಗುರುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿ ಮಾಡಲಿದ್ದಾರೆ.
Vijaya Karnataka Web 15


ನಗರದ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಮಧ್ಯಾಹ್ನ ಚಂದ್ರಬಾಬು ನಾಯ್ಡು ಭೇಟಿ ನಿಗದಿಯಾಗಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ನಾಯ್ಡು ಭೇಟಿ ಮಾಡಿದ್ದರು. ಸದ್ಯದಲ್ಲೇ ಡಿಎಂಕೆ ಧುರೀಣ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ ಮುಖಭಂಗ ಅನುಭವಿಸಿ, ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠರನ್ನು ಅಭಿನಂದಿಸಲು ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಲು ಆಗಮಿಸುತ್ತಿರುವುದಾಗಿ ನಾಯ್ಡು ತಿಳಿಸಿದ್ದಾರೆ ಎಂದು ದೇವೇಗೌಡರ ಆಪ್ತ ಮೂಲಗಳು ತಿಳಿಸಿವೆ. ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಮಹಾಘಟಬಂಧನ್‌ ಬಲಪಡಿಸುವ ಪ್ರಯತ್ನದಲ್ಲಿರುವ ದೇವೇಗೌಡರಿಗೆ ಬೆಂಬಲ ಸೂಚಿಸಿ, ಈ ಸಂಬಂಧ ಚರ್ಚೆ ನಡೆಸುವುದು ನಾಯ್ಡು ಮತ್ತು ದೇವೇಗೌಡರ ಭೇಟಿಯ ಉದ್ದೇಶ ಎನ್ನಲಾಗಿದೆ. ಚಂದ್ರಬಾಬು ನಾಯ್ಡು ಭೇಟಿ ಬಳಿಕ ದೇವೇಗೌಡರು ದಿಲ್ಲಿಗೆ ತೆರಳುತ್ತಿದ್ದು, ವಾರಾಂತ್ಯದ ವರೆಗೂ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ