ಶೀರೂರು ಶ್ರೀಗಳ ಅಂತಿಮ ದರ್ಶನ ಪಡೆದ ನೂರಾರು ಭಕ್ತರು
ಶೀರೂರು ಶ್ರೀ ವಿಧಿವಶ
Vijaya Karnataka Web 19 Jul 2018, 5:25 pm
ಉಡುಪಿ: ಶೀರೂರು ಶ್ರೀಗಳ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಬಳಿಕ ಉಡುಪಿ ಶೀರೂರು ಮಠಕ್ಕೆ ಕರೆ ತರಲಾಯಿತು.
ಶೀರೂರು ಮಠದ ಗುಡಿ ಮುಂಭಾಗ ಇರಿಸಿ ಪೂಜೆ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಸಿಇಒ ಶಿವಾನಂದ ಕಾಪಶಿ, ಜಿಪಂ ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಬಳಿಕ ಮಠದಲ್ಲಿದ್ದ ನೂರಾರು ಭಕ್ತರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ನಂತರ ರಥಬೀದಿಯ ಶೀರೂರು ಮಠದ ಮುಂಭಾಗದಲ್ಲಿ ಇರಿಸಿ ಸಾರ್ವಜನಿಕರ ಅಂತಿಮದರ್ಶನಕ್ಕೆ ಅವಕಾಶ ನೀಡಲಾಯಿತು.
ಸಾವಿರಾರು ಮಂದಿ ಭಕ್ತರು, ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ಶ್ರೀಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.
ಶೀರೂರು ಮಠದ ಗುಡಿ ಮುಂಭಾಗ ಇರಿಸಿ ಪೂಜೆ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಸಿಇಒ ಶಿವಾನಂದ ಕಾಪಶಿ, ಜಿಪಂ ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಬಳಿಕ ಮಠದಲ್ಲಿದ್ದ ನೂರಾರು ಭಕ್ತರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ನಂತರ ರಥಬೀದಿಯ ಶೀರೂರು ಮಠದ ಮುಂಭಾಗದಲ್ಲಿ ಇರಿಸಿ ಸಾರ್ವಜನಿಕರ ಅಂತಿಮದರ್ಶನಕ್ಕೆ ಅವಕಾಶ ನೀಡಲಾಯಿತು.
ಸಾವಿರಾರು ಮಂದಿ ಭಕ್ತರು, ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ಶ್ರೀಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.