ಆ್ಯಪ್ನಗರ

ಯೋಗೀಶ್ ಗೌಡ ಕೊಲೆ ಪ್ರಕರಣ; ಎಫ್‌ಐಆರ್ ದಾಖಲಿಸಿಕೊಂಡ ಸಿಬಿಐ

ಭಾರೀ ಸಂಚಲನವನ್ನು ಸೃಷ್ಟಿಸಿದ್ದ ಧಾರವಾಡ ಜಿಲ್ಲೆಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಕುರಿತಾಗಿ ಸಿಬಿಐ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೆತ್ತಿಕೊಂಡಿದೆ. ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ ಎನ್ನಲಾಗಿದೆ.

Vijaya Karnataka Web 25 Sep 2019, 11:45 pm
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಆರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದು ತನಿಖೆ ಆರಂಭಿಸಿದೆ. ಹತ್ಯೆಯ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂಬ ಆರೋಪದ ಹಿನ್ನೆಲೆಯಲ್ಲಿಈ ಪ್ರಕರಣ ಮಹತ್ವ ಪಡೆದುಕೊಂಡಿತ್ತು.
Vijaya Karnataka Web cbi


ಹತ್ಯೆಯ ಹಿಂದೆ ರಾಜಕಾರಣಿಯೊಬ್ಬರ ಹೆಸರು ಕೇಳಿ ಬಂದ ಕಾರಣಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ. 8 ರಂದು ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಬಸವರಾಜ ಶಿವಪ್ಪ, ಕೀರ್ತಿ ಕುಮಾರ್ ಕುರಹಟ್ಟಿ, ವಿನಾಯಕ ಕಾಟಗಿ, ಸಂದೀಪ್ ಸೌದತ್ತಿ, ಮಹಾಬಲೇಶ್ವರ ಹೊನಗಲ್ ಹಾಗೂ ವಿಕ್ರಮ್ ಬಳ್ಳಾರಿ, ವಿರುದ್ಧ ಬುಧವಾರ ಸಿಬಿಐ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಯೋಗೀಶ್ ಗೌಡ ಕೊಲೆ ಕೇಸ್: ಐವರ ಬಂಧನ

2016, ಜೂನ್ 15 ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸಪ್ತಾಪುರದ ಉದಯ್ ಜಿಮ್ ಬಳಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಜಿಮ್ ನಲ್ಲಿ ಯೋಗೇಶ ಗೌಡ ಪೇಪರ್ ಓದುತ್ತಾ ಕುಳಿತುಕೊಂಡ ಸಂದರ್ಭದಲ್ಲಿ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದರು.

ಓಡಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಬಲಗೈಗೆ ಮಚ್ಚಿನಿಂದ ಕೊಚ್ಚಿದ್ದರು. ನಂತರ ಬೆನ್ನತ್ತಿದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ, ಭೀಕರವಾಗಿ ಕೊಲೆಗೈದಿದ್ದರು.ಈ ಪ್ರಕರಣ ಧಾರವಾಡದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು.

ಹತ್ಯೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೂಡಾ ಪ್ರಕರಣದಲ್ಲಿ ತಳಕು ಹಾಕಿಕ್ಕೊಂಡಿತ್ತು.ಇದೀಗ ಪ್ರಕರಣದ ಕುರಿತಾಗಿ ಆರು ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡಿರುವ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ