ಆ್ಯಪ್ನಗರ

Assembly Session: ಉಭಯ ಸದನದಲ್ಲಿ ಕೊನೆಯ ದಿನದ ಅಬ್ಬರ: ಕೋಲಾಹಲ ಸೃಷ್ಟಿಸುತ್ತಾ 40% ಆರೋಪ

ವಿಧಾನಮಂಡಲ ಅಧಿವೇಶದ ಕೊನೆಯ ದಿನದಂದು ಉಭಯ ಸದನದಲ್ಲಿ 40% ಕಮಿಷನ್ ಆರೋಪ ಸದ್ದು ಗದ್ದಲಕ್ಕೆ ಕಾರಣ ಆಗಲಿದೆ. 40% ಕಮಿಷನ್ ವಿಚಾರವಾಗಿ ನಿಯಮ 69 ಅಡಿಯಲ್ಲಿ ಚರ್ಚೆಗೆ ಈಗಾಗಲೇ ಅವಕಾಶ ಕೋರಿದ್ದಾರೆ. ಸ್ಪೀಕರ್ ಕಾಗೇರಿ ಅವರು ಕೂಡಾ ಚರ್ಚೆಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ಈ ವಿಚಾರವನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 23 Sep 2022, 10:03 am

ಹೈಲೈಟ್ಸ್‌:

  • ವಿಧಾನಮಂಡಲ ಅಧಿವೇಶನದ ಕೊನೆಯ ದಿನದಂದು ಉಭಯ ಸದನದಲ್ಲಿ 40% ಕಮಿಷನ್ ಗದ್ದಲ
  • ಶುಕ್ರವಾರ ಬೆಳಗ್ಗೆ ಪ್ರಶ್ನೋತ್ತರ ಅವಧಿ ಬಳಿಕ 40% ಕಮಿಷನ್ ವಿಚಾರವನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ
  • ಕಾಂಗ್ರೆಸ್ 40% ಆರೋಪಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷ ಬಿಜೆಪಿಯೂ ಸಜ್ಜು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಅಧಿವೇಶನ
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಶುಕ್ರವಾರ ಕೊನೆಯ ದಿನ. ಕೊನೆಯ ದಿನದಂದು ಉಭಯ ಸದನದಲ್ಲಿ 40% ಕಮಿಷನ್ ಆರೋಪ ಸದ್ದು ಗದ್ದಲಕ್ಕೆ ಕಾರಣ ಆಗಲಿದೆ. ಪೇ ಸಿಎಂ ಪೋಸ್ಟರ್‌ ಅಭಿಯಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಸ್ವತಃ ತಾವೇ ಸರ್ಕಾರಿ ಕಚೇರಿಗಳಿಗೆ ಪೋಸ್ಟರ್‌ ಅಂಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
40% Commission: 40% ಕಮಿಷನ್ ಸಿಎಂಗೆ ಸ್ವಾಗತ! ಬೊಮ್ಮಾಯಿ ಅವರನ್ನು ಅಣಕಿಸಿದ ತೆಲಂಗಾಣದ ಟಿಆರ್‌ಎಸ್
40% ಕಮಿಷನ್ ವಿಚಾರವಾಗಿ ನಿಯಮ 69 ಅಡಿಯಲ್ಲಿ ಚರ್ಚೆಗೆ ಈಗಾಗಲೇ ಅವಕಾಶ ಕೋರಿದ್ದಾರೆ. ಸ್ಪೀಕರ್ ಕಾಗೇರಿ ಅವರು ಕೂಡಾ ಚರ್ಚೆಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ಈ ವಿಚಾರವನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ.
ಹಾದಿ ಬೀದಿಯಲ್ಲಿ ಸಿಎಂ ಬೊಮ್ಮಾಯಿಗೆ 40% ಮುಜುಗರ, ಚಿತ್ರ ವಿಚಿತ್ರ ರೀತಿಯಲ್ಲಿ ಅಣಕ!
ಕಾಂಗ್ರೆಸ್ 40% ಆರೋಪಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷ ಬಿಜೆಪಿಯೂ ಸಜ್ಜಾಗಿದ್ದು, ಸಿದ್ದರಾಮಯ್ಯ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ಚರ್ಚೆಗೆ ಅವಕಾಶ ಕೋರಿದೆ. ನಿಯಮ 69 ರ ಅಡಿಯಲ್ಲಿ ಇದಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪೀಕರ್ ಕಾಗೇರಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ 40% ಸದ್ದು ಗದ್ದಲ ಜೋರಾಗುವುದರಲ್ಲಿ ಸಂಶಯವಿಲ್ಲ.
Pay CM Posters | ಬಿಜೆಪಿ, ಕಾಂಗ್ರೆಸ್ ನಡುವೆ QR Code ಜಟಾಪಟಿ; ಪೇ ಸಿಎಂಗೆ ಕಮಲ ಪಡೆ ಕೌಂಟರ್
ಪೇ ಸಿಎಂ ಪೋಸ್ಟರ್ ಅಭಿಯಾನ
ಇನ್ನು ರಾಜ್ಯದ ಗಮನ ಸೆಳೆದಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಬಂಧನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಬಂಧನ ಖಂಡಿಸಿ ಶುಕ್ರವಾರ ವಿಧಾನಸೌಧದ ಆವರಣದ ಸರ್ಕಾರಿ ಕಚೇರಿಗಳಿಗೆ ಪೋಸ್ಟರ್ ಅಂಟಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಲಿದ್ದಾರೆ. ಇದಕ್ಕೂ ಮೊದಲು ಭಾರತ್ ಜೋಡೋ ಯಾತ್ರೆ ಸಂಬಂಧಿಸಿದಂತೆ ಏಟ್ರಿಯಾ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಸದನದ ಹೊರಗೆ ಹಾಗೂ ಒಳಗೆ 40% ಕಮಿಷನ್ ಸದ್ದು ಮಾಡುವುದರಲ್ಲಿ ಸಂಶಯವಿಲ್ಲ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ