ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲು ಕಾರಣವೇನು ಎಂಬ ರಹಸ್ಯವನ್ನು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಬಿಚ್ಚಿಟ್ಟಿದ್ದಾರೆ. ಹೊಸಕೋಟೆಯಲ್ಲಿ ಮಾತನಾಡಿದ ಅವರು, ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡುವ ಕುರಿತಾಗಿ ಬಿಎಸ್ವೈ ಸಮ್ಮುಖದಲ್ಲಿ ಸಂಸದ ಬಚ್ಚೇಗೌಡ ಸಮ್ಮತಿಯ ಬಳಿಕ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಹೊಸತೊಂದು ಬಾಂಬ್ ಸಿಡಿಸಿದ್ದಾರೆ.
ಉಪಚುನಾವಣೆ: ‘ಸಾಹುಕಾರ್’ ಸೋಲಿಸಲು ರಣತಂತ್ರ - ಅಶೋಕ್ ಪೂಜಾರಿ, ರಾಜುಕಾಗೆ 'ಕೈ' ವಶ?
ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣರಾಗಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅನರ್ಹರಾಗಿರುವ ಎಂಟಿಬಿ ರಾಜಕೀಯ ಭವಿಷ್ಯ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಅವಲಂಬಿಸಿದೆ. ಈ ನಡುವೆ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಬಂಡಾಯ ಎಂಟಿಬಿಗೆ ತಲೆನೋವಾಗಿ ಮಾರ್ಪಟ್ಟಿದೆ. ಶರತ್ ಬಚ್ಚೇಗೌಡ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದು ನವೆಂಬರ್ 15 ಕ್ಕೆ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ.
ಅನರ್ಹ ಶಾಸಕರ ಪ್ರಕರಣ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ ಗೊತ್ತಾ?
ಇದೇ ವಿಚಾರವಾಗಿ ಮಾತನಾಡಿದ ಎಂಟಿಬಿ ನಾಗರಾಜ್, ರಾಜೀನಾಮೆ ನೀಡುವ ಮೊದಲು ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಹೊಸಕೋಟೆ ಬಿಜೆಪಿ ಟಿಕೆಟ್ ನೀಡಲು ಬಚ್ಚೇಗೌಡರು ಒಪ್ಪಿಗೆ ಸೂಚಿಸಿದ್ದರು. ಶರತ್ ಬಚ್ಚೇಗೌಡರಿಗೆ ಎಂಎಲ್ಸಿ ಅಥವಾ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಭರವಸೆಯನ್ನು ಬಿಎಸ್ವೈ ನೀಡಿದ್ದರು. ಅಲ್ಲದೆ ಗೃಹಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲು ಮುಂದಾಗಿದ್ದರು. ಆದರೆ ಇವೆಲ್ಲವನ್ನು ಶರತ್ ಬಚ್ಚೇಗೌಡ ತಿರಸ್ಕಾರ ಮಾಡಿದ್ದಾರೆ. ಇದೀಗ ಹಿಂದೆ ಒಪ್ಪಿದ ಮಾತಿಗೆ ಬಚ್ಚೇಗೌಡರು ಉಲ್ಟಾಹೊಡೆದಿದ್ದಾರೆ ಎಂದು ಅಸಮಧಾನ ಹೊರಹಾಕಿದ್ದಾರೆ.
ಡಿಕೆಶಿ ಭೇಟಿಯಾದ ಬಿಜೆಪಿಯ ರಾಜು ಕಾಗೆ, ಅಶೋಕ್ ಪೂಜಾರಿ!
ಎಂಟಿಬಿ ಸುಳ್ಳು ಹೇಳುತ್ತಿದ್ದಾರೆ- ಸಂಸದ ಬಚ್ಚೇಗೌಡ
ಅನರ್ಹ ಶಾಸಕ ಎಂಟಿಬಿ ಆರೋಪವನ್ನು ಬಿಜೆಪಿ ಸಂಸದ ಬಚ್ಚೇಗೌಡ ನಿರಾಕರಿಸಿದ್ದಾರೆ. ಹೊಸಕೋಟೆಯಲ್ಲಿ ಬಿಜೆಪಿಗೆ ಟಿಕೆಟ್ ನೀಡುವ ಕುರಿತಾದ ಯಾವುದೇ ಮಾತುಕತೆ ನಡೆದಿಲ್ಲ. ಅದಕ್ಕೆ ನಾನು ಒಪ್ಪಿಗೆಯನ್ನು ಸೂಚಿಸಿಲ್ಲ. ಎಂಟಿಬಿ ಸುಳ್ಳು ಹೇಳುತ್ತಿದ್ದಾರೆ. ಬಿಎಸ್ವೈ-ಎಂಟಿಬಿ ನಡುವೆ ಏನೆಲ್ಲಾ ಮಾತುಕತೆ ನಡೆದಿದೆ ಎಂಬುವುದು ನನಗೆ ತಿಳಿದಿಲ್ಲ ಎಂದಿದ್ದಾರೆ.
ಇತ್ತೀಚೆಗಷ್ಟೇ ಕೆ.ಆರ್ ಪೇಟೆ ಅನರ್ಹ ಶಾಸಕ ನಾರಾಯಣಗೌಡ ತಮ್ಮ ರಾಜೀನಾಮೆ ರಹಸ್ಯವನ್ನು ಬಿಚ್ಚಿಟ್ಟಿದ್ದರು. ತಮ್ಮ ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ಅನುದಾನ ನೀಡಲು ಬಿಎಸ್ ಯಡಿಯೂರಪ್ಪ ಒಪ್ಪಿಗೆ ನೀಡಿದಕ್ಕಾಗಿ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದರು. ಈ ನಡುವೆ ಸಿಎಂ ಬಿಎಸ್ವೈ ಹುಬ್ಬಳ್ಳಿ ಕೋರ್ ಕಮಿಟಿ ಸಭೆಯ ವಿಡಿಯೋ ದಾಖಲೆ ಮುಂದಿಟ್ಟುಕೊಂಡು ರಾಜ್ಯದಲ್ಲಿ ಆಪರೇಷನ್ ಕಮಲ ನಡೆಸುವಲ್ಲಿ ಬಿಜೆಪಿ ಪಾತ್ರದ ಕುರಿತಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.
ಉಪಚುನಾವಣೆ: ‘ಸಾಹುಕಾರ್’ ಸೋಲಿಸಲು ರಣತಂತ್ರ - ಅಶೋಕ್ ಪೂಜಾರಿ, ರಾಜುಕಾಗೆ 'ಕೈ' ವಶ?
ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣರಾಗಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅನರ್ಹರಾಗಿರುವ ಎಂಟಿಬಿ ರಾಜಕೀಯ ಭವಿಷ್ಯ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಅವಲಂಬಿಸಿದೆ. ಈ ನಡುವೆ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಬಂಡಾಯ ಎಂಟಿಬಿಗೆ ತಲೆನೋವಾಗಿ ಮಾರ್ಪಟ್ಟಿದೆ. ಶರತ್ ಬಚ್ಚೇಗೌಡ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದು ನವೆಂಬರ್ 15 ಕ್ಕೆ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ.
ಅನರ್ಹ ಶಾಸಕರ ಪ್ರಕರಣ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ ಗೊತ್ತಾ?
ಇದೇ ವಿಚಾರವಾಗಿ ಮಾತನಾಡಿದ ಎಂಟಿಬಿ ನಾಗರಾಜ್, ರಾಜೀನಾಮೆ ನೀಡುವ ಮೊದಲು ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಹೊಸಕೋಟೆ ಬಿಜೆಪಿ ಟಿಕೆಟ್ ನೀಡಲು ಬಚ್ಚೇಗೌಡರು ಒಪ್ಪಿಗೆ ಸೂಚಿಸಿದ್ದರು. ಶರತ್ ಬಚ್ಚೇಗೌಡರಿಗೆ ಎಂಎಲ್ಸಿ ಅಥವಾ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಭರವಸೆಯನ್ನು ಬಿಎಸ್ವೈ ನೀಡಿದ್ದರು. ಅಲ್ಲದೆ ಗೃಹಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲು ಮುಂದಾಗಿದ್ದರು. ಆದರೆ ಇವೆಲ್ಲವನ್ನು ಶರತ್ ಬಚ್ಚೇಗೌಡ ತಿರಸ್ಕಾರ ಮಾಡಿದ್ದಾರೆ. ಇದೀಗ ಹಿಂದೆ ಒಪ್ಪಿದ ಮಾತಿಗೆ ಬಚ್ಚೇಗೌಡರು ಉಲ್ಟಾಹೊಡೆದಿದ್ದಾರೆ ಎಂದು ಅಸಮಧಾನ ಹೊರಹಾಕಿದ್ದಾರೆ.
ಡಿಕೆಶಿ ಭೇಟಿಯಾದ ಬಿಜೆಪಿಯ ರಾಜು ಕಾಗೆ, ಅಶೋಕ್ ಪೂಜಾರಿ!
ಎಂಟಿಬಿ ಸುಳ್ಳು ಹೇಳುತ್ತಿದ್ದಾರೆ- ಸಂಸದ ಬಚ್ಚೇಗೌಡ
ಅನರ್ಹ ಶಾಸಕ ಎಂಟಿಬಿ ಆರೋಪವನ್ನು ಬಿಜೆಪಿ ಸಂಸದ ಬಚ್ಚೇಗೌಡ ನಿರಾಕರಿಸಿದ್ದಾರೆ. ಹೊಸಕೋಟೆಯಲ್ಲಿ ಬಿಜೆಪಿಗೆ ಟಿಕೆಟ್ ನೀಡುವ ಕುರಿತಾದ ಯಾವುದೇ ಮಾತುಕತೆ ನಡೆದಿಲ್ಲ. ಅದಕ್ಕೆ ನಾನು ಒಪ್ಪಿಗೆಯನ್ನು ಸೂಚಿಸಿಲ್ಲ. ಎಂಟಿಬಿ ಸುಳ್ಳು ಹೇಳುತ್ತಿದ್ದಾರೆ. ಬಿಎಸ್ವೈ-ಎಂಟಿಬಿ ನಡುವೆ ಏನೆಲ್ಲಾ ಮಾತುಕತೆ ನಡೆದಿದೆ ಎಂಬುವುದು ನನಗೆ ತಿಳಿದಿಲ್ಲ ಎಂದಿದ್ದಾರೆ.
ಇತ್ತೀಚೆಗಷ್ಟೇ ಕೆ.ಆರ್ ಪೇಟೆ ಅನರ್ಹ ಶಾಸಕ ನಾರಾಯಣಗೌಡ ತಮ್ಮ ರಾಜೀನಾಮೆ ರಹಸ್ಯವನ್ನು ಬಿಚ್ಚಿಟ್ಟಿದ್ದರು. ತಮ್ಮ ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ಅನುದಾನ ನೀಡಲು ಬಿಎಸ್ ಯಡಿಯೂರಪ್ಪ ಒಪ್ಪಿಗೆ ನೀಡಿದಕ್ಕಾಗಿ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದರು. ಈ ನಡುವೆ ಸಿಎಂ ಬಿಎಸ್ವೈ ಹುಬ್ಬಳ್ಳಿ ಕೋರ್ ಕಮಿಟಿ ಸಭೆಯ ವಿಡಿಯೋ ದಾಖಲೆ ಮುಂದಿಟ್ಟುಕೊಂಡು ರಾಜ್ಯದಲ್ಲಿ ಆಪರೇಷನ್ ಕಮಲ ನಡೆಸುವಲ್ಲಿ ಬಿಜೆಪಿ ಪಾತ್ರದ ಕುರಿತಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.