ಆ್ಯಪ್ನಗರ

ತಣ್ಣಗಾಗದ ಕಮಲ ಬಂಡಾಯ, ಮತ್ತೊಂದು ಸಭೆ ನಡೆಸುತ್ತಾರಂತೆ ಅತೃಪ್ತರು!

ಕಮಲದಲ್ಲಿ ತಲೆಧೋರಿಸುವ ಆಂತರಿಕ ಬಂಡಾಯ ತಣ್ಣಗಾಗಿಲ್ಲ. ಅತೃಪ್ತರು ಮತ್ತೊಂದು ಸಭೆಯನ್ನು ನಡೆಸುವ ಪ್ಲ್ಯಾನ್‌ ಹಾಕುತ್ತಿದ್ದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ತಂತ್ರ ಹೂಡುತ್ತಿದ್ದಾರೆ ಎನ್ನಲಾಗುತ್ತಿದೆ.

Vijaya Karnataka Web 31 May 2020, 4:07 pm
ಬೆಂಗಳೂರು: ಕಮಲ ಪಾಳಯದಲ್ಲಿ ಭುಗಿಲೆದ್ದ ಬಂಡಾಯ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಮತ್ತೊಂದು ಸುತ್ತಿನ ಸಭೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
Vijaya Karnataka Web bjp bandaya


ಶಾಸಕರಾದ ಉಮೇಶ್ ಕತ್ತಿ, ಬಸನಗೌಡ ಪಾಟೀಲ್‌ ಯತ್ನಾಳ್ ನೇತೃತ್ವದಲ್ಲಿ ಅತೃಪ್ತರ ಬಣ ಒಂದು ಸುತ್ತಿನ ಸಭೆಯನ್ನು ನಡೆಸಿದೆ. ಈ ಸಭೆ ರಾಜ್ಯ ರಾಜಕೀಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಭೆಯ ಬೆನ್ನಲ್ಲೇ ಬಿಎಸ್‌ವೈ ನಾಯಕತ್ವದ ವಿರುದ್ಧ ಅಸಮಾಧಾನವನ್ನು ಶಾಸಕರು ಹೊರಹಾಕಿದ್ದಾರೆ.

ಬಿಜೆಪಿಯಲ್ಲಿ ಯಾವುದೇ ಕಿತ್ತಾಟ ಇಲ್ಲ, ಸರ್ಕಾರ ಸುಭದ್ರ ಎಂದ ಅಶ್ವತ್ಥ್ ನಾರಾಯಣ

ಅತೃಪ್ತ ಶಾಸಕರ ಬಂಡಾಯ ಕಮಲ ಪಾಳಯಕ್ಕೆ ತೀವ್ರ ಮುಜುಗರವನ್ನು ಉಂಟುಮಾಡಿದೆ. ಈ ನಡುವೆ ಬಂಡಾಯಕ್ಕೆ ತೇಪೆ ಹಾಕುವ ಪ್ರಯತ್ನಗಳು ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಬಹಿರಂಗವಾಗಿ ಅತೃಪ್ತಿಯನ್ನು ಹೊರಹಾಕಬಾರದು ಎಂಬ ಸೂಚನೆಯನ್ನು ನೀಡಲಾಗಿದೆ.

ಆದರೆ ಅತೃಪ್ತರು ಇದರಿಂದ ತಣ್ಣಗಾಗಿಲ್ಲ. ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಬಂಡಾಯದ ಬಾವುಟ ಹಾರಿಸಿರುವ ಭಿನ್ನಮತೀಯರು ಮತ್ತೊಂದು ಸಭೆಯನ್ನು ನಡೆಸುವ ಯೋಚನೆಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗ್ರಾಪಂ ಎಲೆಕ್ಷನ್‌ ಮುಂದೂಡಿಕೆ: ಆಯೋಗದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧಾರ: ಎಚ್‌.ಕೆ.ಪಾಟೀಲ್‌

ಬುಧವಾರ ನಗರದಲ್ಲಿ ಮತ್ತೆ ಸಭೆ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಮುಖಂಡರು ಕೂಡಾ ಸಾಕಷ್ಟು ಎಚ್ಚರಿಕೆಗಳನ್ನು ವಹಿಸಿಕೊಂಡಿದ್ದಾರೆ.

ಮತ್ತೊಂದು ಪ್ರತ್ಯೇಕ ಸಭೆ ನಡೆದರೆ ಸರ್ಕಾರಕ್ಕೆ ಇದರಿಂದ ಮತ್ತಷ್ಟು ಮುಜುಗರ ಆಗಲಿದೆ. ಈ ನಿಟ್ಟಿನಲ್ಲಿ ಶಾಸಕರ ಮನವೋಲಿಕೆಯ ಪ್ರಯತ್ನವನ್ನು ನಡೆಸಲಾಗುತ್ತಿದೆ. ಕ್ಷೇತ್ರದ ಅನುದಾನ ವಿಚಾರವಾಗಿಯೂ ಶಾಸಕರ ಜೊತೆಗೆ ಚರ್ಚೆ ನಡೆಸುವ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ