ಆ್ಯಪ್ನಗರ

ಅತೃಪ್ತ ಶಾಸಕರ ಅನರ್ಹತೆ: ಸ್ಪೀಕರ್‌ ಭೇಟಿಗೆ ನಾಲ್ಕು ವಾರ ಕಾಲಾವಕಾಶ ಕೋರಿಕೆ

ಏಕಾಏಕಿ ವಿಚಾರಣೆ ನಡೆಸುವುದು ಸೂಕ್ತವಲ್ಲ. ನಮಗೂ ಕೂಡ ನಮ್ಮ ಹೇಳಿಕೆಗಳನ್ನು ನೀಡಲು ಅವಕಾಶ ನೀಡಿ ಎಂದು ಅತೃಪ್ತ ಶಾಸಕರು ವಿನಂತಿ ಮಾಡಿಕೊಂಡಿದ್ದಾರೆ.

Vijaya Karnataka Web 23 Jul 2019, 4:57 pm
ಬೆಂಗಳೂರು: ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ನೀಡಿದ್ದ ನೋಟಿಸ್‌ಗೆ ಬಗ್ಗದ ಶಾಸಕರು, ತಮ್ಮ ವಕೀಲರ ಮೂಲಕ ನಾಲ್ಕು ವಾರದ ಸಮಯಾವಕಾಶ ಕೇಳಿದ್ದಾರೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ಮಂಗಳವಾರ ಬೆಳಗ್ಗೆ ಪತ್ರದ ಮೂಲಕ ಸ್ಪೀಕರ್ ರಮೇಶ್ ಕುಮಾರ್‌ಗೆ ಮನವಿ ಸಲ್ಲಿಸಿರುವ ಅತೃಪ್ತರು, ಸದ್ಯದ ಪರಿಸ್ಥಿತಿಯಲ್ಲಿ ನಿಮ್ಮನ್ನು ಭೇಟಿಯಾಗಲು ಸಾಧ್ಯವಿಲ್ಲ. ಆದ್ದರಿಂದ ನೇರವಾಗಿ ಭೇಟಿಯಾಗಲು ಸಮಯಾವಕಾಶದ ಅಗತ್ಯವಿದೆ. ನಾಲ್ಕು ವಾರದ ಬಳಿಕ ಬಂದು ನಿಮ್ಮ ಮುಂದೆ ಹಾಜರಾಗುತ್ತೇವೆ ಎಂದಿದ್ದಾರೆ.

ಇದಕ್ಕೂ ಮೊದಲು ರಾಜೀನಾಮೆ ನೀಡಿರುವ 15 ಮಂದಿ ಶಾಸಕರಿಗೆ ನಿಮ್ಮನ್ನು ಏಕೆ ಅನರ್ಹತೆ ಮಾಡಬಾರದೆಂದು ವಿವರಣೆ ನೀಡಬೇಕೆಂದು ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ನೋಟಿಸ್‌ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅತೃಪ್ತ ಶಾಸಕರು ನೋಟಿಸ್‌ಗೆ ಸಂಬಂಧಿಸಿದಂತೆ 4 ವಾರಗಳ ಕಾಲಾವಕಾಶ ನೀಡಬೇಕು. ನೋಟಿಸ್‌ ನೀಡಿದ ನಂತರ ಕನಿಷ್ಠ 7 ದಿನಗಳಾದರೂ ಅವಕಾಶ ಕೊಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅನರ್ಹತೆ ಮಾಡಬೇಕೆಂದು ನೀಡಿರುವ ದೂರಿಗೆ ಸಂಬಂಧಿಸಿದಂತೆ ನಮಗಿನ್ನೂ ಯಾವುದೇ ಸಾಕ್ಷ್ಯಾಾಧಾರಗಳು ಅಥವಾ ಮಾಹಿತಿಗಳು ಕೈ ಸೇರಿಲ್ಲ ಎಂದು ವಿವರಿಸಿದ್ದಾರೆ.

ವಕೀಲರ ಭೇಟಿ ಚರ್ಚೆ

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆ.11ಕ್ಕೆ ಸ್ಪೀಕರ್ ರಮೇಶ್ ಕುಮಾರ್ ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ, ಮುನಿರತ್ನ, ಆರ್.ಶಂಕರ್, ಕೆ.ಗೋಪಾಲಯ್ಯ, ಶಿವರಾಮ್ ಹೆಬ್ಬಾಾರ್, ಬಿ.ಸಿ.ಪಾಟೀಲ್, ಮಹೇಶ್ ಕುಮಟಳ್ಳಿ, ಎಂ.ಟಿ.ಬಿ. ನಾಗರಾಜ್, ಪ್ರತಾಪ್‌ಗೌಡ ಪಾಟೀಲ್ , ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಎಚ್. ವಿಶ್ವನಾಥ್ ಹಾಗೂ ನಾರಾಯಣ ಗೌಡ ಪರವಾಗಿ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹಾಜರಾಗಿ, ಸ್ಪೀಕರ್ ರಮೇಶ್ ಕುಮಾರ್‌ಗೆ ಲಿಖಿತ ವಿವರಣೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ