ಆ್ಯಪ್ನಗರ

ಇಂದಿನಿಂದ ಏಪ್ರಿಲ್ ಮತ್ತು ಮೇ ತಿಂಗಳ ರೇಷನ್​​​​​ ವಿತರಣೆ: ಸಚಿವ ಗೋಪಾಲಯ್ಯ

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆ ಒಂದು ತಿಂಗಳ ಮುಂಚಿತವಾಗಿ ರೇಷನ್​​ ನೀಡುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

Vijaya Karnataka Web 1 Apr 2020, 12:50 pm

ಬೆಂಗಳೂರು: ಏಪ್ರಿಲ್ ಮತ್ತು ಮೇ ಎರಡು ತಿಂಗಳ ಆಹಾರ ಪಡಿತರವನ್ನು ಇಂದಿನಿಂದ ಕೊಡಲು ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆ ಒಂದು ತಿಂಗಳ ಮುಂಚಿತವಾಗಿ ರೇಷನ್ ನೀಡುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
Vijaya Karnataka Web ration


ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ಯೂನಿಟ್ ಗೆ 5 ಕೆ.ಜಿ. ಅಕ್ಕಿ, ಪ್ರತಿ ಕಾರ್ಡಿಗೆ 2ಕೆ.ಜಿ. ಗೋಧಿ ವಿತರಣೆಯಾಗಲಿದ್ದು, ಅಂತ್ಯೋದಯ ಕಾರ್ಡ್ ನವರಿಗೆ 70 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುವುದೆಂದರು.

ಏಪ್ರಿಲ್ 10ರ ಒಳಗೆ ರಾಜ್ಯದ ಪಡಿತರ ವಿತರಣೆ ಪೂರ್ಣಗೊಳಿಸುವ ಗುರಿ‌ ಇದ್ದು, ಏ. 10ರ ನಂತರ ಕೇಂದ್ರ ಸರ್ಕಾರದ ಪಡಿತರ ಪ್ಯಾಕೇಜ್ ವಿತರಣೆ ಆರಂಭವಾಗಲಿದೆ ಎಂದರು.

ಈಗಾಗಲೇ ಬೆರಳಚ್ಚು ವಿಧಾನ ರದ್ದು ಮಾಡಲಾಗಿದ್ದು, ಓಟಿಪಿ ಆಧಾರದ ಹಂಚಿಕೆಯೂ ರದ್ದಾಗಬೇಕಿದೆ. ಹಾಗೇ ಸಾಮಾಜಿಕ ಅಂತರ ಕಾಯಲು ಓಟಿಪಿ ರದ್ದಾಗಬೇಕು ಎಂಬುದು ಪಡಿತರ ವಿತರಕರ ಆಗ್ರಹವಾಗಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ‌ ಇಂದೇ ಪಡಿತರ ವಿತರಣೆ ಶುರುವಾಗಲಿದೆ, ಹಳ್ಳಿಗಳಲ್ಲಿ ವಿತರಣೆ ಮಾಡಲು ಎರಡು ದಿನ ಸಮಯ ಬೇಕಾಗಬಹುದು ಎಂದು ಹೇಳಿದರು.

ಪಡಿತರ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯವಾಗಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಪವನ್‌ ಕುಮಾರ್‌ ಅಗರ್ವಾಲ್‌ ರಾಜ್ಯ ಮುಖ್ಯ ಕಾರ್ಯದರ್ಶಿ ತ.ಮ.ವಿಜಯಭಾಸ್ಕರ್‌ಗೆ ಪತ್ರ ಬರೆದು ಸೂಚನೆ ನೀಡಿದ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ.
ಕೊರೊನಾ ಭೀತಿ; ಏಪ್ರಿಲ್‌, ಮೇ 2 ತಿಂಗಳ ಪಡಿತರ ಒಟ್ಟಿಗೆ ವಿತರಿಸಲು ನಿರ್ಧಾರ
ಕೊರೊನಾ ಭೀತಿ; ಏಪ್ರಿಲ್‌, ಮೇ 2 ತಿಂಗಳ ಪಡಿತರ ಒಟ್ಟಿಗೆ ವಿತರಿಸಲು ನಿರ್ಧಾರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ