ಆ್ಯಪ್ನಗರ

ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ: ಪ್ರತೀ ಹಳ್ಳಿಗಳ ಮನೆಗಳಿಗೆ ಭೇಟಿ ನೀಡಲಿದ್ದಾರೆ ಡಿಸಿ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ!

''ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆ ಎದುರಾದಾಗಾಲೂ ಜಿಲ್ಲಾಧಿಕಾರಿ, ತಹಸೀಲ್ದಾರ್‌ ಕಚೇರಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. 'ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ' ಯೋಜನೆಯ ಅನುಸಾರ ಡಿಸಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಹಳ್ಳಿಯ ಜನರ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು,'' ಎಂದು ಸಚಿವ ಅಶೋಕ್‌ ಹೇಳಿದರು.

Vijaya Karnataka Web 22 Jan 2021, 6:58 am
ಬೆಂಗಳೂರು: ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ 'ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ' ಕಾರ್ಯಕ್ರಮಕ್ಕೆ ಫೆಬ್ರವರಿ ತಿಂಗಳ ಮೂರನೇ ಶನಿವಾರ ಚಾಲನೆ ದೊರೆಯಲಿದೆ. ಜಿಲ್ಲಾಧಿಕಾರಿಗಳ ತಂಡ ಗ್ರಾಮಗಳಿಗೆ ಭೇಟಿ ನೀಡಿ ಕುಂದು ಕೊರತೆ ಆಲಿಸಿ ಅಲ್ಲಿಯೇ ಪರಿಹಾರ ಸೂಚಿಸುವುದು ಈ ಕಾರ್ಯಕ್ರಮದ ವೈಶಿಷ್ಟ್ಯವಾಗಿದೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಕಂದಾಯ ಸಚಿವ ಆರ್‌.ಅಶೋಕ್‌
Vijaya Karnataka Web ಸಾಂದರ್ಭಿಕ ಚಿತ್ರ..


ಈ ವಿಷಯ ತಿಳಿಸಿದರು. ''ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆ ಎದುರಾದಾಗಾಲೂ ಜಿಲ್ಲಾಧಿಕಾರಿ, ತಹಸೀಲ್ದಾರ್‌ ಕಚೇರಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. 'ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ' ಯೋಜನೆಯ ಅನುಸಾರ ಡಿಸಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಹಳ್ಳಿಯ ಜನರ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು,'' ಎಂದು ಸಚಿವ ಅಶೋಕ್‌ ಹೇಳಿದರು.

ಯಾವೆಲ್ಲ ಕುಂದು ಕೊರತೆ?
''ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಫವತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಸಂಬಂಧ ಡಿಸಿಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ,'' ಎಂದರು.

ಗ್ರಾಮ ಭೇಟಿ ಸಂದರ್ಭದಲ್ಲಿ ಗುಡಿಸಲುಗಳನ್ನು ಗುರುತಿಸಿ ಅದರಲ್ಲಿ ವಾಸವಾಗಿರುವವರಿಗೆ ಆಶ್ರಮ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳಬೇಕು. ಗ್ರಾಮದ ಶಾಲೆ, ಅಂಗನವಾಡಿ ಕೇಂದ್ರಗಳಿಗೂ ಭೇಟಿ ನೀಡಬೇಕು. ಜಿಲ್ಲಾಧಿಕಾರಿಗಳು ಹಳ್ಳಿ ಭೇಟಿ ವೇಳೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ