ಆ್ಯಪ್ನಗರ

Sugar Cane Farmers:ಎಥನಾಲ್,‌ ಕಬ್ಬು ಉಪ ಉತ್ಪನ್ನಗಳ ಲಾಭಾಂಶ ಹಂಚಿಕೆ: ತಾಂತ್ರಿಕ ಪರಿಣಿತರ ಸಮಿತಿ ರಚನೆಗೆ ನಿರ್ಧಾರ

ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರು, ಕಬ್ಬು ನಿಯಂತ್ರಣ ಮಂಡಳಿ ಸದಸ್ಯರು ಹಾಗೂ ರೈತ ಹೋರಾಟಗಾರರ ಜೊತೆ ಸಭೆ ನಡೆದಿದೆ. ಹತ್ತು ದಿನಗಳ ಒಳಗಾಗಿ ಸಮಿತಿ ವರದಿ ಪಡೆದು ಕೊಳ್ಳಲಾಗುತ್ತದೆ. ಕಬ್ಬು ಉಪ ಉತ್ಪನ್ನಗಳ ಲಾಭಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಕೊಡಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇದೆ ಎಂದು ಸಕ್ಕರೆ ಸಚಿವರು ತಿಳಿಸಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 10 Nov 2022, 6:53 pm

ಹೈಲೈಟ್ಸ್‌:

  • ಎಥನಾಲ್ ಸೇರಿದಂತೆ ಕಬ್ಬು ಉಪ ಉತ್ಪನ್ನಗಳ ಲಾಭಾಂಶವನ್ನು ರೈತರಿಗೆ ಹಂಚಿಕೆ ಮಾಡಲು ನಿರ್ಧಾರ
  • ವರದಿ ನೀಡಲು ಸಮಿತಿಗೆ ಹತ್ತು ದಿನಗಳ ಕಾಲಾವಕಾಶ ನೀಡಿದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ
  • ಸರ್ಕಾರ ನೀತಿ ಪಾಲನೆ ಮಾಡದೆ ಹೋದರೆ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Shankar Patil
ಶಂಕರ್ ಪಾಟೀಲ್ ಮುನೇನಕೊಪ್ಪ
ಬೆಂಗಳೂರು: ಎಥನಾಲ್ ಸೇರಿದಂತೆ ಕಬ್ಬು ಉಪ ಉತ್ಪನ್ನಗಳ ಲಾಭಾಂಶವನ್ನು ರೈತರಿಗೆ ಹಂಚಿಕೆ ಮಾಡುವ ನಿಟ್ಟಿನಲ್ಲಿ ತಾಂತ್ರಿಕ ಪರಿಣಿತರ ಸಮಿತಿ ರಚನೆಗೆ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ವರದಿ ನೀಡಲು ಸಮಿತಿಗೆ ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.
ವಿಕಾಸಸೌಧದಲ್ಲಿ ರಾಜ್ಯ ಕಬ್ಬು ನಿಯಂತ್ರಣ ಮಂಡಳಿ ಸದಸ್ಯರು ಹಾಗೂ ರಾಜ್ಯದ ಕಬ್ಬು ಮಾಲೀಕರು ಮತ್ತು ವ್ಯವಸ್ಥಾಪಕರೊಂದಿಗೆ ಗುರುವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರು, ಕಬ್ಬು ನಿಯಂತ್ರಣ ಮಂಡಳಿ ಸದಸ್ಯರು ಹಾಗೂ ರೈತ ಹೋರಾಟಗಾರರ ಜೊತೆ ಸಭೆ ನಡೆದಿದೆ. ಹತ್ತು ದಿನಗಳ ಒಳಗಾಗಿ ಸಮಿತಿ ವರದಿ ಪಡೆದು ಕೊಳ್ಳಲಾಗುತ್ತದೆ. ಕಬ್ಬು ಉಪ ಉತ್ಪನ್ನಗಳ ಲಾಭಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಕೊಡಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇದೆ. ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರ ನೇತೃತ್ವದಲ್ಲಿ ಐವರು ಸದಸ್ಯರನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ ಎಂದರು.

2020-21 ನೇ ಸಾಲಿನಲ್ಲಿ 19,635.88 ಕೋಟಿ ಪಾವತಿ ಕಬ್ಬು ಬೆಳೆಗಾರರಿಗೆ ಮಾಡಬೇಕಿತ್ತು. ಇದರಲ್ಲಿ 100 ಶೇ ಪಾವತಿ ಆಗಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾಲ್ ಸೆಂಟರ್ ತೆರೆಯಲು ಸೂಚನೆ ನೀಡಲಾಗಿದೆ. ಇಳುವರಿ ಹಾಗೂ ತೂಕದಲ್ಲಿ ಹಾಗೂ ಪಾವತಿಯಲ್ಲಿ ಅನ್ಯಾಯ ಆಗದಂತೆ ಹಾಗೂ ಪಾರದರ್ಶಕತೆ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಬ್ಬು ಬೆಳೆಗಾರರ ಪರವಾಗಿ ಸರ್ಕಾರ ಇದೆ. ಸಿಎಂಗೆ ಎಲ್ಲ ವರದಿಯನ್ನು ನೀಡಲಾಗುತ್ತದೆ. ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ರೈತರ ಪರವಾದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ನೀತಿ ಪಾಲನೆ ಮಾಡದೆ ಹೋದರೆ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವ ಎಚ್ಚರಿಕೆ ನೀಡಲಾಗಿದೆ. ಹೆಚ್ಚಿನ ಕಾರ್ಖಾನೆ ಬಂದರೆ ಅದಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ