ಆ್ಯಪ್ನಗರ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ್‌ ಆಪ್ತರಿಗೆ ರಿಲೀಫ್‌, 4 ವಾರ ಬಂಧಿಸದಂತೆ ಹೈಕೋರ್ಟ್ ಸೂಚನೆ

ಮಾಜಿ ಸಚಿವ ಡಿಕೆ ಶಿವಕುಮಾರ್ ಕಚೇರಿ, ನಿವಾಸದ ಮೇಲೆ ದಾಳಿ ನಡೆಸಿದಾಗ 300 ಕೋಟಿ ರೂ. ಗಳಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿತ್ತು ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿದ್ದವು.

Vijaya Karnataka Web 17 Sep 2019, 3:53 pm
ಹೊಸದಿಲ್ಲಿ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಸಂಕಷ್ಟದ ಸುಳಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್‌ ಸಿಲುಕಿದ್ದರು. ಅವರ ಆಪ್ತರಿಗೆ ತುಸು ಸಮಾಧಾನ ಸಿಕ್ಕಿದೆ.
Vijaya Karnataka Web ಹೈಕೋರ್ಟ್‌
ಹೈಕೋರ್ಟ್‌


ಅಕ್ರಮ ಹಣ ವರ್ಗಾವಣೆ, ಆದಾಯ ತೆರಿಗೆ ಇಲಾಖೆ ದಾಳಿ ವೇಲೆ ಕೋಟ್ಯಂತರ ರೂಪಾಯಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಆಪ್ತರಾದ ಸಚಿನ್‌ ನಾರಾಯಣ್‌, ಆಂಜನೇಯ, ಸುನಿಲ್‌ ಕುಮಾರ್‌ ಶರ್ಮಾ ಅವರನ್ನು ಬಂಧಿಸದಂತೆ ಹೈಕೋರ್ಟ್‌ ಆದೇಶ ನೀಡಿದೆ.

ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಮುಂದಿನ ನಾಲ್ಕುವಾರಗಳ ಕಾಲ ಡಿಕೆಶಿ ಆಪ್ತರಿಗೆ ರಿಲೀಫ್‌ ದೊರೆತಂತಾಗಿದೆ.

ಡಿಕೆ ಶಿವಕುಮಾರ್‌ ಅವರ ನಿವಾಸ, ಕಚೇರಿಗಳ ಮೇಲೆ ಆಗಸ್ಟ್‌ 1, 2017 ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಹೊಸದಿಲ್ಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ