ಆ್ಯಪ್ನಗರ

ಮೆಡಿಕಲ್ ಕಾಲೇಜು ವಿವಾದ; ಯಡಿಯೂರಪ್ಪರಿಂದ ಸೇಡಿನ ಪಾಲಿಟಿಕ್ಸ್ ಎಂದ್ರು ಡಿಕೆಶಿ

ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ವರ್ಗಾವಣೆ ವಿಚಾರ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಸರಕಾರದ ನಡುವೆ ತಿಕ್ಕಾಟ ಜೋರಾಗಿದೆ. ಮೆಡಿಕಲ್ ಕಾಲೇಜು ವರ್ಗಾವಣೆ ಮಾಡುವ ಮೂಲಕ ಸೇಡಿನ ರಾಜಕಾರಣವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ.

Vijaya Karnataka Web 31 Oct 2019, 2:37 pm
ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪನವರ ಪಾಲಿಟಿಕ್ಸ್ ತಗೊಂಡು ನಾನೇನ್ ಮಾಡಲಿ. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ನಮ್ಮ ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರ. ಅದನ್ನು ಬದಲಿಸೋ ಮೂಲಕ ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
Vijaya Karnataka Web dks and sudhakar


ಡಿಕೆಶಿ v/s ಸುಧಾಕರ್ ‘ಮೆಡಿಕಲ್’ ಜಟಾಪಟಿ-ಕುತೂಹಲ ಕೆರಳಿಸಿದೆ ಸಿಎಂ ನಡೆ

ಕನಕಪುರಕ್ಕೆ ಮೆಡಿಕಲ್ ಕಾಲೇಜ್ ಕೊಡೋದಿಲ್ಲ. ಕೇವಲ ಜಿಲ್ಲಾ ಕೇಂದ್ರಗಳಿಗೆ ಮಾತ್ರ ಅನ್ನೋ ಸಿಎಂ ಬಿಎಸ್ ವೈ ಹೇಳಿಕೆ ವಿಚಾರ ಕುರಿತು ಕೆಪಿಸಿಸಿ ಕಚೇರಿ ಬಳಿ ಗುರುವಾರ ಪ್ರತಿಕ್ರಿಯಿಸಿದ ಅವರು, 'ಅಧಿಕಾರ ಶಾಶ್ವತ ಅಲ್ಲ. ದ್ವೇಷದ ರಾಜಕೀಯ ಮಾಡೋದಾದ್ರೆ ಮಾಡಲಿ. ನಾನು ದ್ವೇಷದ ರಾಜಕಾರಣ ಮಾಡ್ತೀನಿ ಅನ್ನೋ ಸಂದೇಶವನ್ನ ಯಡಿಯೂರಪ್ಪ ರವಾನೆ ಮಾಡಿದ್ದಾರೆ. ಸುಧಾಕರ್ ಅವರದು ತಪ್ಪು ಅಂತಾ ನಾನು ಹೇಳಲ್ಲ. ಎಲ್ಲಿಗಾದ್ರೂ ಕೊಡಲಿ. ಆದ್ರೆ ನಮ್ಮ ಸರ್ಕಾರ ಕನಕಪುರಕ್ಕೆ ಮೆಡಿಕಲ್ ಕಾಲೇಜ್ ಅಪ್ರೂವಲ್ ಮಾಡಿತ್ತು. ಅದನ್ನು ಕಿತ್ತುಕೊಳ್ಳೋದು ನ್ಯಾಯವಲ್ಲ' ಎಂದರು.

ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜ್ ಎತ್ತಂಗಡಿ! ಪ್ರಾಣ ಹೋದ್ರೂ ಬಿಡಲ್ಲ ಅಂದ್ರು ಡಿಕೆಶಿ

ಕನಕಪುರಕ್ಕೂ ಕಾಲೇಜು ಕೊಡಲಿ. ಚಿಕ್ಕಬಳ್ಳಾಪುರಕ್ಕೂ ಕೊಡಲಿ. ಯಡಿಯೂರಪ್ಪನವರು ಅವರು ಈ ಬಗ್ಗೆ ನನ್ನ ಜೊತೆ ಮಾತಾಡಲಿ. ನಾನು ಕೂಡ ಅವ್ರಿಗೆ ಪತ್ರ ಬರೆಯುತ್ತೇನೆ. ಕನಕಪುರಕ್ಕೆ ಕಾಲೇಜು ನೀಡೋ ವಿಚಾರದಿಂದ ಅವರು ಹಿಂದೆ ಹೋಗೋದು ಬೇಡ. ಯಾರನ್ನೋ ಹೊಸದಾಗಿ ಪಕ್ಷಕ್ಕೆ ಸೇರಿಸಿಕೊಂಡೇ ಅನ್ನೋ ಕಾರಣಕ್ಕೆ ಅಲ್ಲಿನ ಕಾಲೇಜು ತೆಗೆದು ಇಲ್ಲಿಗೆ ಕೊಡೋದು ಸರಿಯಲ್ಲ' ಎಂದರು.

ಬೇರೆ ಬೇರೆ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ಕೊಟ್ಟಿದ್ದೇವೆ. ಕೆಲವರು ಅಕ್ಕಿ ಕೊಟ್ಟೆ ಅಂತಾರೆ. ಕೆಲವರು ಸೈಕಲ್ ಕೊಟ್ಟೆ ಅಂತಾರೆ. ಕೆಲವರು ಸಾಲ ಮನ್ನಾ ಮಾಡಿದೆ ಅಂತಾರೆ. ಹೀಗಾಗಿ ನಾನು ನನ್ನ ಕ್ಷೇತ್ರಕ್ಕೆ ಏನಾದರೂ ಮಾಡಬೇಕು ಅನ್ನೋದು ನನ್ನ ಲೈಫ್ ಟೈಮ್ ಗುರಿ. ಹೀಗಾಗಿ ಕನಕಪುರ ಕ್ಷೇತ್ರಕ್ಕೆ ಮೆಡಿಕಲ್ ಕಾಲೇಜು ಕೊಡಬೇಕು. ಒಂದು ವೇಳೆ ಸರ್ಕಾರ ಕೊಡದಿದ್ರೆ ನಾನು ಸುಮ್ಮನೆ ಕೂರಲ್ಲ ಎಂದರು.

ಟಿಪ್ಪು ವಿವಾದ ದಲ್ಲಿ ಇತಿಹಾಸ ತಿರುಚೋದು ಬೇಡ

ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸ ಕೈ ಬಿಡುವ ರಾಜ್ಯ ಸರಕಾರ ನಿಲುವಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿಗಳೇ ಇಲ್ಲಿಗೆ ಬಂದು ಟಿಪ್ಪು ಪರ ಭಾಷಣ ಮಾಡಿದ್ದಾರೆ. ಆದ್ರಿಂದ ಇದರಲ್ಲಿ ಹೊಸದಾಗಿ ನಾನೇನ್ ಹೇಳೋದಿದೆ? ಇತಿಹಾಸ ತಿರುಚಬಾರದು ಅಷ್ಟೇ' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ