ಆ್ಯಪ್ನಗರ

ಡಿಕೆ ಶಿವಕುಮಾರ್‌ ಭೇಟಿಗೆ ಕಾಂಗ್ರೆಸ್ ನಾಯಕರಿಗೆ ಅವಕಾಶ ನಿರಾಕರಣೆ

ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಭೇಟಿಗೆ ಕಾಂಗ್ರೆಸ್ ಮುಖಂಡರಿಗೆ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಅವಕಾಶ ನಿರಾಕರಿಸಿದ್ದಾರೆ.

Vijaya Karnataka Web 4 Sep 2019, 3:00 pm
ಹೊಸದಿಲ್ಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದ ಕಾಂಗ್ರೆಸ್ ಮುಖಂಡರಿಗೆ ಭೇಟಿ ನಿರಾಕರಿಸಲಾಗಿದೆ.
Vijaya Karnataka Web Congress Members DK Shivakumar in hospital


ಅನಾರೋಗ್ಯದಿಂದ ಬಳಲುತ್ತಿರುವ ಡಿ.ಕೆ. ಶಿವಕುಮಾರ್‌ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಇಂದು ಬೆಳಿಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ವಿ.ಎಸ್ ಉಗ್ರಪ್ಪ, ಡಿ.ಕೆ. ಸುರೇಶ್, ಮಿಥುನ್ ರೈ ಸೇರಿದಂತೆ ಹಲವರು ಆಸ್ಪತ್ರೆಗೆ ತೆರಳಿದ್ದರು. ಆದರೆ ಪೊಲೀಸರು ಭೇಟಿಗೆ ಅವಕಾಶ ನಿರಾಕರಿಸಿ ಆಸ್ಪತ್ರೆಯಿಂದ ಇವರುಗಳನ್ನು ಹೊರಗೆ ಕಳುಹಿಸಿದ್ದಾರೆ.

ಆಸ್ಪತ್ರೆ ವಾರ್ಡ್ ಪ್ರವೇಶಕ್ಕೆ ಯಾರಿಗೂ ಅವಕಾಶ ನೀಡಬಾರದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೂಚನೆ ನೀಡಿದ್ದರಿಂದ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಡಿಕೆಶಿ ಭೇಟಿ ಮಾಡಲು ಯಾರಿಗೂ ಅವಕಾಶ ನೀಡುತ್ತಿಲ್ಲ.

ಲೋಹಿಯಾ ಆಸ್ಪತ್ರೆ ಆವರಣ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು ಆಸ್ಪತ್ರೆಯ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಿಆರ್‌ಪಿಎಫ್ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ