ಆ್ಯಪ್ನಗರ

ಸರಕಾರ ಪತನಗೊಳ್ಳುತ್ತದೆ ಎಂದು ಡಿವಿಎಸ್‌ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ: ಡಿಕೆಶಿ

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಜಲಸಂಪನ್ಮೂಲ ಸಚಿವರ ಟಾಂಗ್‌

Vijaya Karnataka Web 8 Jul 2018, 4:37 pm
ಹಾಸನ: ಸರ್ಕಾರ ಯಾವಾಗಬೇಕಾದರೂ ಪತನಗೊಳ್ಳಬಹುದು ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡಗೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.
Vijaya Karnataka Web ಡಿಕೆ ಶಿವಕುಮಾರ್‌
ಡಿಕೆ ಶಿವಕುಮಾರ್‌


ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಸರಕಾರ ಪತನಗೊಳ್ಳಬಹುದು ಎಂದು ಸದಾನಂದಗೌಡ ಹೇಳಿದ್ದಾರೆ. ಸದಾನಂದ ಗೌಡರು ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ ಎಂದು ಟಾಂಗ್‌ ನೀಡಿದರು.

ಸದಾನಂದಗೌಡರು ಬಹಳ ಸಂತೋಷವಾಗಿದ್ದಾರೆ ಅವರು ಆನಂದವಾಗಿರಲಿ. ರಾಜ್ಯದಲ್ಲಿ ವಿರೋದ ಪಕ್ಷ ಮಲಗಿದೆ ಪ್ರತಿ ಪಕ್ಷ ಸದಸ್ಯರು ಮೊದಲು ಮೊದಲು ಎಚ್ಚರವಾಗಲಿ. ಆದರೆ ನಾವು ನಮ್ಮ ಡ್ಯೂಟಿ ನಾವು ಮಾಡ್ತೇವೆ ಎಂದು ಹೇಳಿದರು.

ಬಜೆಟ್ ಬಗ್ಗೆ ಕೇವಲ ರಾಜಕೀಯ ಕಾರಣದಿಂದ ಟೀಕೆ ಮಾಡಲಾಗುತ್ತಿದೆ. ರಾಜ್ಯ ಬಜೆಟ್ ಅತ್ಯಂತ ಶಕ್ತಿ ಶಾಲಿಯಾಗಿದೆ.
ಎಲ್ಲಾ ವರ್ಗದ ಜನರಿಗೆ ಬಜೆಟ್ ನಲ್ಲಿ ಅನುಕೂಲವಾಗಿದೆ. ಸಾಲಾ ಮನ್ನಾ ಕೇವಲ ಕೆಲವು ಜಿಲ್ಲೆಗೆ ಸೀಮಿತವಾಗಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ