ಆ್ಯಪ್ನಗರ

ಬಿಎಸ್‌ವೈಯನ್ನು ಭೇಟಿಯಾದ ಡಿಕೆಶಿ, ಸಿಎಂ ಮುಂದಿಟ್ಟ ಬೇಡಿಕೆ ಏನು?

ಕನಕಪುರ ಜಿಲ್ಲೆಗೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ನೀಡಿದಕ್ಕಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಆಕ್ರೋಶಗೊಂಡಿದ್ದು ಮಂಗಳವಾರ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Vijaya Karnataka 18 Feb 2020, 3:08 pm
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಭೇಟಿಯ ವೇಳೆ ಕನಕಪುರ ವೈದ್ಯಕೀಯ ಕಾಲೇಜು ಸ್ಥಳಾಂತರ ರದ್ದು ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.
Vijaya Karnataka Web dk shivakumar meets bs yeddyurappa on medical college controversy
ಬಿಎಸ್‌ವೈಯನ್ನು ಭೇಟಿಯಾದ ಡಿಕೆಶಿ, ಸಿಎಂ ಮುಂದಿಟ್ಟ ಬೇಡಿಕೆ ಏನು?


ಮಂಗಳವಾರ ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಡಿಕೆ ಶಿವಕುಮಾರ್ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರಾತ್ರೋ ರಾತ್ರಿ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿರುವ ನಿರ್ಧಾರ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಾಣ ಹೋದ್ರೂ ಮೆಡಿಕಲ್‌ ಕಾಲೇಜು ಬಿಡಲ್ಲ: ಡಿಕೆಶಿ ಪ್ರತಿಜ್ಞೆ

ದ್ವೇಷದ ರಾಜಕಾರಣ ಮಾಡುವಿದಿಲ್ಲ ಎಂದು ಭರವಸೆ ನೀಡಿರುವ ನಿಮ್ಮಂತ ರಾಜಕಾರಣಿಯಿಂದ ಇಂತಹ ನಿರ್ಧಾರವನ್ನು ನಿರೀಕ್ಷೆ ಮಾಡಿರಲಿಲ್ಲ. ಈ ನಿಟ್ಟಿನಲ್ಲಿ ಕೈಗೊಂಡಿರುವ ನಿರ್ಧಾರವನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜನ್ನು ನೀಡಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಬದಲಾಗಿ ಕನಕಪುದಿಂದ ಮಂಜೂರಾಗಿರುವುದನ್ನು ವಾಪಸ್‌ ಪಡೆದುಕೊಂಡಿರುವುದು ಸರಿಯಲ್ಲಎಂದಿರುವ ಡಿಕೆಶಿ, ಸಿಎಂ ತನ್ನ ನಿರ್ಧಾರವನ್ನು ಬದಲಾಯಿಸಬೇಕು ಇಲ್ಲದೇ ಇದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕನಕಪುರ ಮೆಡಿಕಲ್ ಕಾಲೇಜು ಮರು ಆದೇಶಕ್ಕೆ ಒತ್ತಾಯಿಸಿ ಸಿಎಂಗೆ ಡಿಕೆಶಿ 'ಎಚ್ಚರಿಕೆಯ' ಪತ್ರ

ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕುಣಿಗಲ್ ಶಾಸಕ ಡಾ. ರಂಗನಾಥ್, ವಿಧಾನಪರಿಷತ್ ಸದಸ್ಯರಾದ ಸಿ.ಎಂ. ಲಿಂಗಪ್ಪ, ಎಚ್.ಎಂ. ರೇವಣ್ಣ, ಎಸ್. ರವಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ