ಆ್ಯಪ್ನಗರ

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದ ಡಿಕೆಶಿ

ಕುಂದಗೋಳ ವಿಧಾನಸಭೆ ಕ್ಷೇತ್ರದ ಮರುಚುನಾವಣೆ ಸಂಬಂಧ ಹದಿನೈದು ದಿನಗಳಿಂದ ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟಿದ್ದ ಸಚಿವರು ಶನಿವಾರ ಸಂಜೆ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದವರೇ ನೇರವಾಗಿ ದೇವೇಗೌಡರ ಮನೆಗೆ ತೆರಳಿ, ಅವರಿಗೆ ಪುಷ್ಪಗುಚ್ಛ ಕೊಟ್ಟು ಶುಭಾಶಯ ಹೇಳಿದರು.

Vijaya Karnataka Web 18 May 2019, 11:08 pm
ಬೆಂಗಳೂರು: ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಪದ್ಮನಾಭನಗರದ ಮನೆಯಲ್ಲಿ ಶನಿವಾರ ರಾತ್ರಿ ಭೇಟಿ ಮಾಡಿ 87 ನೇ ಜನ್ಮದಿನದ ಶುಭಾಶಯ ಕೋರಿದರು.
Vijaya Karnataka Web hdd dks


ಕುಂದಗೋಳ ವಿಧಾನಸಭೆ ಕ್ಷೇತ್ರದ ಮರುಚುನಾವಣೆ ಸಂಬಂಧ ಹದಿನೈದು ದಿನಗಳಿಂದ ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟಿದ್ದ ಸಚಿವರು ಶನಿವಾರ ಸಂಜೆ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದವರೇ ನೇರವಾಗಿ ದೇವೇಗೌಡರ ಮನೆಗೆ ತೆರಳಿ, ಅವರಿಗೆ ಪುಷ್ಪಗುಚ್ಛ ಕೊಟ್ಟು ಶುಭಾಶಯ ಹೇಳಿದರು.

ನಾಳೆ (ಮೇ 19ರಂದು) ಕುಂದಗೋಳ, ಚಿಂಚೋಳಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಉಸ್ತುವಾರಿಯ ಹೊಣೆ ಹೊತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್ ಶನಿವಾರ (ಮೇ 18) ಬೆಂಗಳೂರಿಗೆ ವಾಪಸಾಗಿದ್ದಾರೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡರ 87 ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ