ಆ್ಯಪ್ನಗರ

ಕೊರೊನಾ, ಓಮ್ರಿಕಾನ್‌ ಹೆಸರಿನಲ್ಲಿ ಶೋಷಣೆ ಬೇಡ: ಡಿಕೆ ಶಿವಕುಮಾರ್‌

ಮಾಜಿ ಪ್ರಧಾನಿ ದೇವೇಗೌಡರ ಜತೆ ಪ್ರಧಾನಿ ನರೇಂದ್ರ ಮೋದಿ ಅವರ ಮಾತುಕತೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಅದು ಅವರ ಪಕ್ಷ, ಅವರ ನಿರ್ಧಾರ. ಅದರ ಬಗ್ಗೆ ನಾವು ಮಾತನಾಡುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿಳಿಸಿದರು.

Vijaya Karnataka Web 30 Nov 2021, 8:45 pm
ಬೆಂಗಳೂರು: ಕೊರೊನಾ ರೂಪಾಂತರಿ ಓಮ್ರಿಕಾನ್‌ ಆತಂಕ ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿದೆ. ಭಾರತ ಮತ್ತು ಕರ್ನಾಟಕದಲ್ಲೂ ಈ ಬಗ್ಗೆ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಆದರೆ ಈ ಹೆಸರಿನಲ್ಲಿ ಶೋಷಣೆ ಆಗಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.
Vijaya Karnataka Web ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್


ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆ ಶಿವಕುಮಾರ್ ಮಾಧ್ಯಮ ಪ್ರತಿಕ್ರಿಯೆ ನೀಡಿದರು.

ಪರೀಕ್ಷೆ ಹೆಸರಲ್ಲಿ ಶೋಷಣೆ ಬೇಡ

ವಿಮಾನ ನಿಲ್ದಾಣ ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಶೋಷಣೆ ಹೆಚ್ಚಾಗಿದೆ. ಸರಕಾರ 3 ಸಾವಿರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದೆ. ಈ ವಿಚಾರದಲ್ಲಿ ದೊಡ್ಡ ಲಾಭಿ ನಡೆಯುತ್ತಿದೆ. ವಿದೇಶಕ್ಕೆ ಹೋಗಿ ಬಂದವರಿಗೆ ಉಚಿತ ಪರೀಕ್ಷೆ ನಡೆಸದೆ 3 ಸಾವಿರ ವಸೂಲಿ ಮಾಡುತ್ತಿರುವುದೇಕೆ? ಇದು ಸರಿಯಲ್ಲ. ಪರೀಕ್ಷೆಗೆ ಇಷ್ಟು ದುಬಾರಿ ಮೊತ್ತ ವಿಶ್ವದ ಇತರೆ ಯಾವುದೇ ರಾಷ್ಟ್ರಗಳಲ್ಲಿ ಪಡೆಯುತ್ತಿಲ್ಲ. ಜನ ಈಗಾಗಲೇ ಸಾಕಷ್ಟು ನೊಂದಿದ್ದು, ಅವರನ್ನು ಇನ್ನಷ್ಟು ಕಾಡುವುದು ಬೇಡ ಎಂದು ತಿಳಿಸಿದರು.

ಓಮಿಕ್ರಾನ್‌ಗೆ ಏಕರೂಪ ಚಿಕಿತ್ಸೆಗೆ ಮಾರ್ಗಸೂಚಿ, ಡಾ. ರವಿ ನೇತೃತ್ವದಲ್ಲಿ ಪರಿಣತರ ಸಮಿತಿ: ಕೆ ಸುಧಾಕರ್

ಕೋವಿಡ್ ಆತಂಕದ ಸಮಯದಲ್ಲಿ ಮುಖ್ಯಮಂತ್ರಿಗಳು ಖಾಸಗಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಅಕ್ಕಿ ಒಂದು ಕಡೆಯಿದೆ, ಅರಿಶಿನ ಒಂದುಕಡೆ ಇದೆ. ಎರಡು ಸೇರಿ ಮಂತ್ರಾಕ್ಷತೆ ಆಗುತ್ತದೆ. ಅವರು ಎಲ್ಲರಿಗೂ ಆಶೀರ್ವಾದ ಮಾಡುತ್ತಿದ್ದಾರೆ. ಮಾಡಲಿ ಬಿಡಿ' ಎಂದರು.

'ನಾವು ಕೇವಲ ಕೇರಳ ಗಡಿ ಭಾಗದಲ್ಲಿ ಮಾತ್ರ ಎಚ್ಚರಿಕೆ ವಹಿಸುತ್ತೇವೆ ಎಂದರೆ ಸಾಲದು. ಎಲ್ಲ ರೀತಿಯಲ್ಲೂ ನಾವು ಎಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆ, ರಾಷ್ಟ್ರ ಮಟ್ಟ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನೀಡುವ ಮಾರ್ಗಸೂಚಿ ಅನುಸರಿಸೋಣ. ಯಾರನ್ನೂ ಅನಗತ್ಯವಾಗಿ ಗಾಬರಿಗೊಳಿಸುವುದು ಬೇಡ' ಎಂದು ತಿಳಿಸಿದರು.

ಈಶ್ವರಪ್ಪ ಅವರ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಈ ವಿಚಾರದಲ್ಲಿ ಚರ್ಚೆ ಬೇಡ. ಈಶ್ವರಪ್ಪ ಅವರು ಹಿರಿಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ, ಉಪಮುಖ್ಯಮಂತ್ರಿ ಆಗಿದ್ದವರು. ಪಕ್ಷದಲ್ಲಿ ವ್ಯಾಪಕವಾಗಿ ಆಗುವ ಚರ್ಚೆ ಬಗ್ಗೆ ಹೇಳಿದ್ದಾರೆ. ಮುಖ್ಯಮಂತ್ರಿಗಳು ಅವರನ್ನು ಸಂಪುಟದಿಂದ ಕೈ ಬಿಡಬೇಕು, ಇಲ್ಲವೇ ಅವರೇ ರಾಜೀನಾಮೆ ನೀಡಬೇಕು. ಸರಕಾರದಲ್ಲಿರುವವರೇ ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದ ಮೇಲೆ, ಅವರ ನಾಯಕತ್ವದ ಮೇಲೆ ನಂಬಿಕೆ ಇಲ್ಲ ಎಂಬುದು ಸಾಬೀತಾದಂತಾಗಿದೆ. ಅಮಿತ್ ಶಾ ಅವರು ಬೊಮ್ಮಾಯಿ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂದು ಹೇಳುತ್ತಾರೆ. ಆದರೆ ಇವರು ನಿರಾಣಿ ಸಿಎಂ ಆಗುತ್ತಾರೆ ಎನ್ನುತ್ತಾರೆ. ಆ ಪಕ್ಷದಲ್ಲಿ ಯಾವುದೂ ಸರಿಯಿಲ್ಲ ಎಂದು ಇದರಿಂದ ಗೊತ್ತಾಗುತ್ತದೆ' ಎಂದು ಡಿಕೆ ಶಿವಕುಮಾರ್‌ ತಿಳಿಸಿದರು.

ಡೆಲ್ಟಾ ತಳಿ ಮಾರಕವಾಗಿದ್ದಾಗಲೂ ಕೋವಿಶೀಲ್ಡ್ ಲಸಿಕೆ ಪರಿಣಾಮಕಾರಿಯಾಗಿತ್ತು: ಲ್ಯಾನ್ಸೆಟ್ ಅಧ್ಯಯನ

ಸಿದ್ದರಾಮಯ್ಯ ಅವರನ್ನು ಕುಡುಕ ಎಂಬ ಸಚಿವ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 'ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಕೈಯಲ್ಲಿ ಹಿಡಿದಿರುವುದನ್ನು ಈಶ್ವರಪ್ಪ ಕೈಗೆ ನೀಡಿ' ಎಂದು ಡಿಕೆ ಶಿವಕುಮಾರ್‌ ಛೇಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ