ಆ್ಯಪ್ನಗರ

ಬದುಕಿರುವಾಗಲೇ ರೈತರನ್ನು ಸಾಯಿಸಲು ಹೊರಟಿದ್ದಾರೆ: ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್‌ ಕಿಡಿ

ಇದೊಂದು ಪಕ್ಷ ಜಾತಿ ಹೋರಾಟ ಅಲ್ಲ, ಅನ್ನದಾತನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ. ದೇಶದ ಬೆನ್ನುಲುಬು ರೈತರ ಬೆಂಬಲಕ್ಕೆ ನಾವಿದ್ದೇವೆ. ಅನ್ನದಾತನ ಬಾಯಿಗೆ ಮಣ್ಣು ಹಾಕುವ ಕೆಲಸ ನಡೆಯುತ್ತಿದೆ. ಕೃಷಿ ಕಾಯ್ದೆ ಕರಾಳ ಕಾಯ್ದೆಯಾಗಿದೆ ರೈತರ ಪಾಲಿಗೆ ಮರಣ ಶಾಸನವಾಗಿದೆ ಎಂದು ಡಿಕೆ ಶಿವಕುಮಾರ್‌ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.

Vijaya Karnataka Web 8 Dec 2020, 12:40 pm
ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕೃಷಿ ಮಸೂದೆ ವಿರುದ್ಧ ತಿರುಗಿ ಬಿದ್ದಿರುವ ರೈತ ಸಂಘಟನೆಗಳು ಇಂದು ದೇಶ ವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆ ದೇಶದಾದ್ಯಂತ ಕೆಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಇನ್ನು ಬೆಂಗಳೂರಿನ ಟೌನ್‌ಹಾಲ್‌ ಬಳಿ ಕೂಡ ಪ್ರತಿಭಟನೆ ನಡೆಯುತ್ತಿದೆ.
Vijaya Karnataka Web dk shivkumar new


ಈ ಹಿನ್ನೆಲೆ ರೈತರ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಗಮಿಸುವ ಮೂಲಕ ಸಾಥ್‌ ನೀಡಿದರು. ಬಳಿಕ ಮಾತನಾಡಿದ ಶಿವಕುಮಾರ್‌, ಇದೊಂದು ಪಕ್ಷ ಜಾತಿ ಹೋರಾಟ ಅಲ್ಲ, ಅನ್ನದಾತನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ. ದೇಶದ ಬೆನ್ನುಲುಬು ರೈತರ ಬೆಂಬಲಕ್ಕೆ ನಾವಿದ್ದೇವೆ. ಅನ್ನದಾತನ ಬಾಯಿಗೆ ಮಣ್ಣು ಹಾಕುವ ಕೆಲಸ ನಡೆಯುತ್ತಿದೆ. ಕೃಷಿ ಕಾಯ್ದೆ ಕರಾಳ ಕಾಯ್ದೆಯಾಗಿದೆ ರೈತರ ಪಾಲಿಗೆ ಮರಣ ಶಾಸನವಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಯಾವ ಪಕ್ಷದವರನ್ನು ಕರೆಯದೆ ಈ ಕಾಯ್ದೆ ಜಾರಿಗೆ ತಂದಿದ್ದಾರೆ. ಇದರಿಂದಾಗಿ ಮಾರುಕಟ್ಟೆಯ ಮೇಲೆ ಖಾಸಗಿ ಕಂಪನಿಗಳ ಪ್ರವೇಶ ಮಾಡುತ್ತಿದೆ. ಬದುಕಿರುವಾಗಲೇ ಇವರು ರೈತರನ್ನು ಸಾಯಿಸಲು ಹೊರಟಿದ್ದಾರೆ. ಕಾಂಟ್ರಾಕ್ಟ್ ಫಾರ್ಮಿಂಗ್‌ನಿಂದಲೂ ರೈತರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿದರು. ಸದ್ಯ ಇರುವ ಕೃಷಿ ಮಂಡಳಿಗಳನ್ನು ನಾಶ ಮಾಡಲು ಸರ್ಕಾರ ಹೊರಟಿವೆ. ಬೆಂಬಲ ಬೆಲೆಗೆ ಯಾವುದೇ ಕಾಯ್ದೆ ಜಾರಿಗೊಳಿಸಲು. ರೈತರು ಆಯ್ಕೆ ಸ್ವಾತಂತ್ರ್ಯ ಕಳೆದುಕೊಳ್ಳುವಂತಾಗಿದೆ. ಈ ನಿಟ್ಟಿನಲ್ಲಿ ರೈತನಿಗೆ ರಕ್ಷಣೆ ಮಾಡಬೇಕಾಗಿದೆ, ಕಾಂಗ್ರೆಸ್ ಕೂಡಾ ಬೆಂಬಲ ನೀಡುತ್ತಿದೆ ಎಂದರು.

Bharath Bandh Live: ಕರ್ನಾಟಕದ ಯಾವ ಜಿಲ್ಲೆಯಲ್ಲಿ ಹೇಗಿದೆ ಬಂದ್‌ ಬಿಸಿ? ಇಲ್ಲಿದೆ ಕ್ಷಣ ಕ್ಷಣದ ಮಾಹಿತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ