ಆ್ಯಪ್ನಗರ

ಡಿಕೆಶಿ ವಿರುದ್ಧದ ತಡೆಯಾಜ್ಞೆ ಮುಂದುವರಿಕೆ

ಹೊಸದಿಲ್ಲಿಯ ಫ್ಲ್ಯಾಟ್‌ನಲ್ಲಿ ದೊರೆತ 860 ಕೋಟಿ ರೂಪಾಯಿಗಳಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ...

Vijaya Karnataka 5 Sep 2019, 5:00 am
ಬೆಂಗಳೂರು: ಹೊಸದಿಲ್ಲಿಯ ಫ್ಲ್ಯಾಟ್‌ನಲ್ಲಿ ದೊರೆತ 8.60 ಕೋಟಿ ರೂಪಾಯಿಗಳಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನೀಡಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮುಂದುವರಿಸಿದೆ.
Vijaya Karnataka Web dks it cases
ಡಿಕೆಶಿ ವಿರುದ್ಧದ ತಡೆಯಾಜ್ಞೆ ಮುಂದುವರಿಕೆ


ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯಪೀಠ ಆ.20ರಂದು ನೀಡಿದ್ದ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ಪ್ರತಿವಾದಿಗಳಿಗೆ ಇನ್ನೂ ನೋಟಿಸ್‌ ಜಾರಿಯಾಗದ ಕಾರಣ ತಡೆಯಾಜ್ಞೆಯನ್ನು ನ್ಯಾಯಪೀಠ ಮುಂದುವರಿಸುವುದಾಗಿ ಆದೇಶಿಸಿತು. ಪ್ರಕರಣದ ಆರೋಪದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಮತ್ತು ಅವರ ಆಪ್ತರಾದ ಆಂಜನೇಯ ಹನುಮಂತಯ್ಯ ಹಾಗೂ ಎನ್‌. ರಾಜೇಂದ್ರ ಅವರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ