ಆ್ಯಪ್ನಗರ

ಡಿಕೆಶಿ ವಿರುದ್ಧದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ಮುಂದುವರಿಕೆ

ಹೊಸದಿಲ್ಲಿಮತ್ತು ಬೆಂಗಳೂರು ಸೇರಿ ಹಲವೆಡೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಸಂಬಂಧ ಶಾಸಕ ಡಿಕೆ...

Vijaya Karnataka 19 Sep 2019, 5:00 am
ಬೆಂಗಳೂರು: ಹೊಸದಿಲ್ಲಿಮತ್ತು ಬೆಂಗಳೂರು ಸೇರಿ ಹಲವೆಡೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಸಂಬಂಧ ಶಾಸಕ ಡಿ.ಕೆ.ಶಿವಕುಮಾರ್‌ ಮತ್ತಿತರರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನÜಲ್ಲಿನಡೆಯುತ್ತಿದ್ದ ವಿಚಾರಣೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮತ್ತೆ ವಿಸ್ತರಿಸಿದೆ.
Vijaya Karnataka Web dks stay continue
ಡಿಕೆಶಿ ವಿರುದ್ಧದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ಮುಂದುವರಿಕೆ


ವಿಶೇಷ ಕೋರ್ಟ್‌ ಆದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್‌, ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿದ್ದ ಪುನರ್‌ ಪರಿಶೀಲನಾ ಅರ್ಜಿಗಳನ್ನು ಆಲಿಸಿದ ನ್ಯಾ. ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯಪೀಠ ವಿಚಾರಣೆ ಬಳಿಕ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರಿಸಿತು.

ಕೆಲ ಕಾಲ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ ಮುಂದಿನ ವಿಚಾರಣೆ ಅ.9ಕ್ಕೆ ನಿಗದಿಪಡಿಸಿದೆ. ಪ್ರಕರಣದಿಂದ ತಮ್ಮನ್ನು ಕೈಬಿಡಬೇಕೆಂದು ಕೋರಿ ಡಿ.ಕೆ.ಶಿವಕುಮಾರ್‌ ಸೇರಿ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು.

ಡಿ.ಕೆ.ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ದಿಲ್ಲಿಯ ಮನೆಗಳ ಮೇಲೆ 2017ರ ಆ.2ರಂದು ಐ.ಟಿ ಅಧಿಕಾರಿಗಳು ದಾಳಿ ಮಾಡಿ 8,59ಕೋಟಿ ಮೊತ್ತವನ್ನು ಜಪ್ತಿ ಮಾಡಿದ್ದರು. ಆ ಸಂಬಂಧ ಡಿ.ಕೆ.ಶಿವಕುಮಾರ್‌, ಸಚಿನ್‌ ನಾರಾಯಣ, ಸುನಿಲ್‌ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಪ್ರಕರಣ ದಾಖಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ