ಆ್ಯಪ್ನಗರ

ವೈದ್ಯರ ಮುಷ್ಕರ: ಬೆಳಗಾವಿಯಲ್ಲಿ 45 ದಿನದ ಮಗು ಸಾವು

ಜ್ವರದಿಂದ ಬಳಲುತ್ತಿದ್ದ ಒಂದುವರೆ ತಿಂಗಳ ಮಗು ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ.

Vijaya Karnataka Web 17 Nov 2017, 1:23 pm
ಬೆಳಗಾವಿ: ಜ್ವರದಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಮಗುವಿಗೆ ವೈದ್ಯರ ಮುಷ್ಕರದಿಂದ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ.
Vijaya Karnataka Web doctor strike 45 days baby died in belegavi
ವೈದ್ಯರ ಮುಷ್ಕರ: ಬೆಳಗಾವಿಯಲ್ಲಿ 45 ದಿನದ ಮಗು ಸಾವು


ಸುರೇಶ್‌ ಮತ್ತು ಶ್ರೀದೇವಿ ವಡ್ರಾಳೆ ದಂಪತಿಯ 45 ದಿನದ ಗಂಡು ಮಗುವಿಗೆ ಫೋಲಿಯೋ ಲಸಿಕೆ ಹಾಕಿಸಿದ ದಿನದಿಂದಲೇ ತೀವ್ರ ಜ್ವರ ಕಾಣಿಸಿಕೊಳ್ಳುತ್ತಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲು ಮುಂದಾಗಿದ್ದರು. ಆದರೆ, ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಕಾರಣ ಅಲ್ಲಿಯೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ವಿದ್ಯಾರ್ಥಿನಿ ಸಾವು

ಖಾಸಗಿ ವೈದ್ಯರ ಮಷ್ಕರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿಯಾಗಿದ್ದಾರೆ. ಪೂಜಾ ಮೃತಪಟ್ಟ ಯುವತಿ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಡಯಾಲಿಸಿಸ್ ಮಾಡಲು ಕರೆತರಲಾಗಿತ್ತು.ಆದರೆ,ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಯುವತಿಗೆ ಡಯಾಲಿಸಿಸ್ ಮಾಡಲು ಸಾಧ್ಯವಾಗದ ಕಾರಣ ಆಕೆ ಮೃತಪಟ್ಟಿದ್ದಾರೆ.

ತುಮಕೂರಿನಲ್ಲಿ ಎರಡು ಬಲಿ....

ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದ ಕಾರಣ ಇಬ್ಬರು ಬಲಿಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್‌ನ ಕಗ್ಗೆರೆ ಗ್ರಾಮ ನಾಗಣ್ಣ (35), ಕೊರಟಗೆರೆ ಪಟ್ಟಣದ ಕಾಳಿದಾಸ ನಗರದ ಸದಾಶಿವಯ್ಯ (57) ಮೃತ ದುರ್ದೈವಿ.

ನಾಗಣ್ಣ ಹಾಗೂ ಸದಾಶಿವಯ್ಯ ಅವರಿಗೆ ಹೃದಯಾಘಾತವಾಗಿದ್ದು, ಸಕಾಲಕ್ಕೆ ಚಿಕಿತ್ಸೆ ದೊರೆಯದ ಕಾರಣ ಮೃತಪಟ್ಟಿದ್ದಾರೆ.
ಖಾಸಗಿ ವೈದ್ಯರ ಮುಷ್ಕರಕ್ಕೆ ಈವರೆಗೆ ಒಟ್ಟಾರೆ ಜಿಲ್ಲೆಯ ಮೂವರು ಬಲಿಯಾಗಿದ್ದಾರೆ.

ಸೋಮವಾರ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಹಾಗೂ ಮಂಗಳವಾರ ಮಹಮ್ಮದ್ ಪ್ಯಾರು ಎಂಬುವರು ಮೃತಪಟ್ಟಿದ್ದರು.

ಬಾಗಲಕೋಟೆಯಲ್ಲಿ ಮಹಿಳೆ ಸಾವು...

ಸಕಾಲಕ್ಕೆ ಚಿಕಿತ್ಸೆ ಸಿಗದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಆಶಾಬಿ ಲಾಡಖಾನ (57) ಮೃತ ದುರ್ದೈವಿ.

ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಆಶಾಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲೆಂದು ಮುಧೋಳ ನಗರಕ್ಕೆ ಕರೆತರಲಾಗಿತ್ತು. ಆದರೆ, ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಕೊನೆಗೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿಯೂ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಮಹಿಳೆ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆ ವೈದ್ಯರಿಂದ ಈವರೆಗೆ ಜಿಲ್ಲೆಯಲ್ಲಿ 11 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಯಾದಗಿರಿಯಲ್ಲಿ ಮೂವರ ಸಾವು...

ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮೂವರು ಸಾವಿಗೀಡಾಗಿದ್ದಾರೆ. ಕಡಂಗೇರಾ ಗ್ರಾಮದ ಬೀಬಿ ಫಾತಿಮಾ, ಗಡ್ಡೆಸೂಗುರು ಗ್ರಾಮದ ಶಿವರಾಯ ಮತ್ತು ಹೊಸಳ್ಳಿ ತಾಂಡಾದ ರಾಮು ಮೃತಪಟ್ಟವರು.

ಖಾಸಗಿ ಆಸ್ಪತ್ರೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಆದರೆ, ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಮೃಟಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ