ಆ್ಯಪ್ನಗರ

ದ್ವಿತೀಯ ಹಂತದ ಕಾಯಿಲೆಗಳಿಗೆ ಸಾಮಾನ್ಯ ವೈದ್ಯರೂ ಚಿಕಿತ್ಸೆ ನೀಡಬಹುದು

ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಯ್ದ ತಾಲೂಕು ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ 36 ಬಗೆಯ ಕಾಯಿಲೆಗಳಿಗೆ ನುರಿತ ತಜ್ಞರ ಹೊರತಾಗಿ ...

Vijaya Karnataka 6 Jun 2019, 5:00 am
ಬೆಂಗಳೂರು: ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಯ್ದ ತಾಲೂಕು ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ 36 ಬಗೆಯ ಕಾಯಿಲೆಗಳಿಗೆ ನುರಿತ ತಜ್ಞರ ಹೊರತಾಗಿ ಸಾಮಾನ್ಯ ಕರ್ತವ್ಯನಿರತ ವೈದ್ಯರಿಗೆ ಚಿಕಿತ್ಸೆ ನೀಡಲು ಸರಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
Vijaya Karnataka Web tetascope


ಆಯುಷ್ಮಾನ್‌ ಭಾರತ್‌ - ಆರೋಗ್ಯ ಕರ್ನಾಟಕ ಯೋಜನೆಯಡಿ ದ್ವಿತೀಯ ಹಂತದ ಚಿಕಿತ್ಸೆಯನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಪಡೆಯಲು ಅವಕಾಶ ಕಲ್ಪಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾರ್ವಜನಿಕ ಆರೋಗ್ಯ ಸಂಸ್ಥೆಯ ವೈದ್ಯರು ನೋಂದಾಯಿತ ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ರೆಫರ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಆರೋಗ್ಯ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರಕಾರ ರೋಗಿಯ ಆರೋಗ್ಯ ಸ್ಥಿತಿ ಹಾಗೂ ನುರಿತ ತಜ್ಞರ ಅಗತ್ಯತೆಯನ್ನು ಪರಿಗಣಿಸಿ ಚಿಕಿತ್ಸೆ ಒದಗಿಸುವುದು ಸೇರಿದಂತೆ ಕೆಲ ಷರತ್ತುಗಳೊಂದಿಗೆ ಸಾಮಾನ್ಯ ಕರ್ತವ್ಯ ನಿರತ ವೈದ್ಯರಿಗೂ ಚಿಕಿತ್ಸೆ ನೀಡಲು ಅನುಮತಿ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ