ಆ್ಯಪ್ನಗರ

ಕಂಪ್ಲಿ ಶಾಸಕ ಎಲ್ಲಿದ್ದಾರೆ ಗೊತ್ತಿಲ್ಲ: ಡಿಕೆಶಿ

ಶಾಸಕ ಜೆ.ಎನ್‌. ಗಣೇಶ್‌ ಎಲ್ಲಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಪೊಲೀಸರು ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದರು.

Vijaya Karnataka 27 Jan 2019, 5:00 am
ರಾಮನಗರ : ಶಾಸಕ ಜೆ.ಎನ್‌. ಗಣೇಶ್‌ ಎಲ್ಲಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಪೊಲೀಸರು ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದರು.
Vijaya Karnataka Web dont know abovt mla ganesha says dks
ಕಂಪ್ಲಿ ಶಾಸಕ ಎಲ್ಲಿದ್ದಾರೆ ಗೊತ್ತಿಲ್ಲ: ಡಿಕೆಶಿ


ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಾನು ರಾಜ್ಯದಲ್ಲಿ ಇರಲಿಲ್ಲ. ಕಾರ್ಯನಿಮಿತ್ತ ಹೊಸದಿಲ್ಲಿಯಲ್ಲಿ ಉಳಿದುಕೊಂಡಿದ್ದೆ. ಶಾಸಕ ಗಣೇಶ್‌ ಎಲ್ಲಿದ್ದಾರೆ, ಹೇಗಿದ್ದಾರೆ ಎಂಬುದು ನನಗೇನು ಗೊತ್ತಿಲ್ಲ,'' ಎಂದರು.

''ಶಾಸಕ ಆನಂದ್‌ ಸಿಂಗ್‌ ಅವರ ಸ್ಥಿತಿ ಸುಧಾರಿಸಿದ್ದು, ಆರೋಗ್ಯವಾಗಿದ್ದಾರೆ. ಈ ಘಟನೆ ನಡೆಯಬಾರದಿತ್ತು ನಡೆದು ಹೋಗಿದೆ. ಗಣೇಶ್‌ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲು ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ