ಆ್ಯಪ್ನಗರ

ಕೇರಳದಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಡೇ ಔಟ್: ಇ. ಶ್ರೀಧರನ್ ಜತೆ ಮಾತುಕತೆ

ಕೇರಳ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಒಂದು ದಿನದ ಕೇರಳ ಪ್ರವಾಸ ನಡೆಸಿದರು. ಅಲ್ಲಿನ ಬಿಜೆಪಿ ಮುಖಂಡ ಇ. ಶ್ರೀಧರನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Vijaya Karnataka Web 7 Mar 2021, 9:38 pm
ತಿರುವನಂತಪುರ: ಕೇರಳ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭಾನುವಾರ ಕೇರಳದಲ್ಲಿ ವಿವಿಧ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
Vijaya Karnataka Web dr cn ashwath narayan kerala


ದಿನಪೂರ್ತಿ ವಿವಿಧ ಗಣ್ಯರು ಹಾಗೂ ಧರ್ಮ ಗುರುಗಳನ್ನು ಭೇಟಿಯಾದ ಡಿಸಿಎಂ ಅವರು, ಮುಖ್ಯವಾಗಿ ಬಿಜೆಪಿ ಮುಖಂಡರು ಹಾಗೂ ಮೆಟ್ರೋಮನ್ ಇ ಶ್ರೀಧರನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಪ್ರಚಾರ, ಕಾರ್ಯಕ್ರಮಗಳು, ಸಭೆಗಳ ಬಗ್ಗೆ ಡಿಸಿಎಂ ಅವರು ಶ್ರೀಧರನ್ ಜತೆ ಚರ್ಚೆ ನಡೆಸಿದರು.

ಶಾಂತಿಗಿರಿ ಆಶ್ರಮಕ್ಕೆ ಭೇಟಿ: ಮಧ್ಯಾಹ್ನ 1 ಗಂಟೆ ವೇಳೆಗೆ ಪೊಥೆನ್ ಕೋಡ್‌ನಲ್ಲಿರುವ ಆಶ್ರಮಕ್ಕೆ ಆಗಮಿಸಿದ ಡಿಸಿಎಂ ಅವರು , ಸ್ವಾಮಿ ಗುರುರೀತನಮ್ ಜ್ಞಾನ ತಪಸ್ವಿ ಅವರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಡಿಸಿಎಂ ಅವರು ಆಶ್ರಮದಲ್ಲಿ ನಡೆಯುತ್ತಿರುವ ಸೇವಾ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಅಲ್ಲಿನ ಚಟುವಟಿಕೆಗಳ ಬಗ್ಗೆ ಆಶ್ರಮದ ಆಡಳಿತಾಧಿಕಾರಿ ಸ್ವಾಮಿ ಗುರುಮಿತ್ರನ್ ಜ್ನಾನ ತಪಸ್ವಿ ಅವರು ಮಾಹಿತಿ ನೀಡಿದರು. ಅಲ್ಲಿನ ಪ್ರಶಾಂತ ವಾತಾವರಣ ಹಾಗೂ ಸೇವಾ ಕಾರ್ಯಗಳನ್ನು ಕಂಡು ಡಿಸಿಎಂ ಅವರು ಅತೀವ ಸಂತಸ ವ್ಯಕ್ತಪಡಿಸಿದರು.

ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಉಚಿತ ಲ್ಯಾಪ್‌ಟಾಪ್‌ ಶೀಘ್ರದಲ್ಲಿ..

ನಾರಾಯಣ ಗುರುಗಳಿಗೆ ಗೌರವ:
ತಿರುವನಂತಪುರ‌ ಜಿಲ್ಲೆಯ ವರ್ಕಾಲದಲ್ಲಿರುವ ಶ್ರೀ ನಾರಾಯಣ ಗುರು ಅವರ ಸಮಾಧಿ ಇರುವ ಶಿವಗಿರಿ ಮಠಕ್ಕೆ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭೇಟಿ ನೀಡಿದರು. ಈ ವೇಳೆ ಗುರುಗಳ ಸಮಾಧಿಗೆ ನಮನ ಸಲ್ಲಿಸಿದರು ಅವರು.

ತದ ನಂತರ ಡಿಸಿಎಂ ಅವರು, ತಿರುವನಂತಪುರದ ಕಾರ್ಡಿನಲ್ ಕ್ಲೀಮಿಸ್ ಎಮಿನೇನ್ಸ್ ಮಲಂಕರ ಚರ್ಚಿಗೆ ಭೇಟಿ ನೀಡಿ ಫಾದರ್ ಜತೆ ಮಾತುಕತೆ ನಡೆಸಿದರು. ಇದೆ ವೇಳೆ ಡಿಸಿಎಂ ಅವರು , ಕೇರಳದ ವಿವಿಧ ನಾಯಕರ ಜತೆ ಪ್ರಚಾರ, ಬಹಿರಂಗ ಸಭೆಗಳ ಆಯೋಜನೆಗಳ ಬಗ್ಗೆ ಸಲಹೆಗಳನ್ನು ನೀಡಿದರು.

ಕ್ವಾಂಟಮ್ ಸಂಶೋಧನೆಗೆ ಹೆಚ್ಚು ಆದ್ಯತೆ, ಡಾ. ಸಿ.ಎನ್. ‌ಅಶ್ವತ್ಥನಾರಾಯಣ

ಇದೆ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇರಳದ ಜನರು ಪ್ರಗತಿಯನ್ನು ಕೋರುತ್ತಿದ್ದಾರೆ. ಪಕ್ಷದ ಪರ ಅಲೆ ಬೀಸುತ್ತಿದೆ. ಎಲ್ಡಿಎಫ್ ಹಾಗೂ ಯುಡಿಎಫ್ ಆಡಳಿತ ಜನತೆಗೆ ಸಾಕಾಗಿದೆ ಎಂದರು. ಕಾಂಗ್ರೆಸ್ ಹಾಗೂ ಎಡಪಕ್ಷಗಳಿಗೆ ಪರ್ಯಾಯವಾದ ರಾಜಕೀಯ ಶಕ್ತಿ ಉದಯಕ್ಕೆ ಇದು ಸಕಾಲ ಎಂದು ಡಿಸಿಎಂ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯದ ಬಿಜೆಪಿಯ ಕೆಲ ಮುಖಂಡರು ಡಿಸಿಎಂ ಜತೆಯಲ್ಲಿ ಇದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಂಜೆ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ