ಆ್ಯಪ್ನಗರ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ: ಸಚಿವ ಜಾರ್ಜ್‌ ವಿರುದ್ಧ ಎಫ್‌ಐಆರ್‌

ಸಚಿವ ಕೆಜೆ ಜಾರ್ಜ್‌ ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ

Vijaya Karnataka Web 26 Oct 2017, 8:51 pm
ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.
Vijaya Karnataka Web dysp ganapathy suicide fir on kj george
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ: ಸಚಿವ ಜಾರ್ಜ್‌ ವಿರುದ್ಧ ಎಫ್‌ಐಆರ್‌


ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅವರನ್ನು ಮೊದಲನೇ ಆರೋಪಿ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಪೊಲೀಸ್‌ ಅಧಿಕಾರಿಗಳಾದ ಐಜಿ ಪ್ರಣಬ್‌ ಮೊಹಂತಿ 2ನೇ ಆರೋಪಿ, ಎ.ಎಂ. ಪ್ರಸಾದ್‌ ಮೂರನೇ ಆರೋಪಿ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಡಿವೈಎಸ್‌ಪಿ ಗಣಪತಿ ಅವರು ಮಡಿಕೇರಿಯಲ್ಲಿ ಜುಲೈ 7ರಂದು ಆತ್ಮಹತ್ಯೆಕೊಂಡಿದ್ದರು. ಸ್ಥಳೀಯ ವಾಹಿನಿಗೆ ಸಂರ್ದಶನ ನೀಡಿದ ಸಂದರ್ಭದಲ್ಲಿ ಜಾರ್ಜ್‌, ಪ್ರಣಬ್‌ ಮೊಹಂತಿ, ಅಶಿತ್‌ ಮೋಹನ್‌ ಪ್ರಸಾದ್‌ ಕಾರಣ ಎಂದು ಆರೋಪಿಸಿದ್ದರು. ಆ ನಂತರ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.




ಸಚಿವರು, ರಾಜಕಾರಣಿಗಳು, ಅಧಿಕಾರಿಗಳ ಒತ್ತಡ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ರಾಜ್ಯ ಸರಕಾರ ಒಪ್ಪಿಸಿತ್ತು.

ತನಿಖೆ ನಡೆಸಿದ ಸಿಐಡಿ ಕೆ.ಜೆ. ಜಾರ್ಜ್‌, ಪ್ರಣಬ್‌ ಮೊಹಂತಿ, ಪ್ರಸಾದ್‌ ಅವರಿಗೆ ಕ್ಲೀನ್‌ಚಿಟ್‌ ನೀಡಿತ್ತು.

ಸಿಐಡಿ ವರದಿಯಲ್ಲಿ ಕ್ಲೀನ್‌ಚಿಟ್‌ ನೀಡಿರುವುದನ್ನು ಪ್ರಶ್ನಿಸಿ ಗಣಪತಿ ತಂದೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕೋರಿದ್ದರು.

Dysp Ganapathy Suicide: FIR On KJ George

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ