ಆ್ಯಪ್ನಗರ

ಜಮೀರ್‌ಗೆ ಇ.ಡಿ ಸಮನ್ಸ್‌

ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹ್ಮದ್‌ ಅವರಿಗೆ ವಿಚಾರಣೆಗೆ ...

Vijaya Karnataka 29 Jun 2019, 5:00 am
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹ್ಮದ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ.
Vijaya Karnataka Web congress- zameer ahamed


ಸೈಟ್‌ ಮಾರಾಟ ಮಾಡಿ ಐಎಂಎನಿಂದ 5 ಕೋಟಿ ರೂ. ಪಡೆದಿದ್ದೇನೆ ಎಂದು ಜಮೀರ್‌ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿಯೇ ಸಮನ್ಸ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ. ಜಮೀರ್‌ ಅವರು ಜುಲೈ 5ರಂದು ವಿಚಾರಣೆಗೆ ಹಾಜರಾಗಬೇಕಾಗಿದೆ.

ಶುಕ್ರವಾರದಂದು ಸಚಿವರ ಮನೆಗೇ ತೆರಳಿದ ಇ.ಡಿ ಅಧಿಕಾರಿಗಳು, ತಾಸುಗಟ್ಟಲೇ ಕಾದು ಸಮನ್ಸ್‌ ಕೊಟ್ಟು ಬಂದಿದ್ದಾರೆ. ಇದೇ ವೇಳೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ಗೂ ಜೂ.24ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿತ್ತು. ಆದರೆ, ಆತ ತಲೆಮರೆಸಿಕೊಂಡಿದ್ದಾನೆ.

ವಿಚಾರಣೆಗೆ ಹೋಗುತ್ತೇನೆ: ಸಮನ್ಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಜಮೀರ್‌ ಅವರು, ''2017ರಲ್ಲಿ ರಿಚ್ಮಂಡ್‌ ಟೌನ್‌ನಲ್ಲಿರುವ ಆಸ್ತಿಯನ್ನು ಐಎಂಎಗೆ ಮಾರಾಟ ಮಾಡಿ 2018ರಲ್ಲಿ ಸೇಲ್‌ ಡೀಡ್‌ ಮಾಡಿಕೊಟ್ಟಿದ್ದೆ. ಅದರ ಮೊತ್ತವನ್ನು ಆರ್‌ಟಿಜಿಎಸ್‌ ಮೂಲಕವೇ ಪಡೆದಿದ್ದೇನೆ. ಅದನ್ನು ಐಟಿ ರಿಟರ್ನ್ಸ್‌ನಲ್ಲಿ ತೋರಿಸಿದ್ದೇನೆ. ಅದಕ್ಕೆ ತೆರಿಗೆ ಕಟ್ಟಿದ್ದೇನೆ. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದರೆ ನನಗೆ ಇನ್ನೂ ಸಂತೋಷ. ಕಡು ಬಡವರು ಕೂಡ ಹೂಡಿಕೆ ಮಾಡಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು'' ಎಂದು ಸಚಿವರು ಹೇಳಿದರು.

ಆಸ್ತಿ ಮುಟ್ಟುಗೋಲು: ಈ ನಡುವೆ, ಐಎಂಎ ಗ್ರೂಪ್‌ಗೆ ಸೇರಿದ 12 ಕೋಟಿ ರೂ. ಬ್ಯಾಂಕ್‌ ಡೆಪಾಸಿಟ್‌ ಸೇರಿದಂತೆ 209 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.

ರೆಡ್‌ ಕಾರ್ನರ್‌ ನೋಟಿಸ್‌:
ಮನ್ಸೂರ್‌ ಖಾನ್‌ ಬಂಧನಕ್ಕೆ ಜಾರಿ ನಿರ್ದೇಶನಾಲಯದಿಂದ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ