ಆ್ಯಪ್ನಗರ

ಸಚಿವ ಡಿಕೆಶಿ ವಿರುದ್ಧ ದಿಲ್ಲಿಯಲ್ಲಿ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ತೆರಿಗೆ ವಂಚನೆ, ಅಕ್ರಮ ಹಣಕಾಸು ವರ್ಗಾವಣೆ ಮತ್ತು ದಾಖಲೆಗಳಿಲ್ಲದ ಕೋಟ್ಯಂತರ ರೂ. ನಗದು ವಶ ಸಹಿತ ವಿವಿಧ ಹಣಕಾಸು ಅಕ್ರಮ ಪ್ರಕರಣದಲ್ಲಿ ರಾಜ್ಯದ ಸಚಿವ ಡಿ. ಕೆ. ಶಿವಕುಮಾರ್ ಸಹಿತ ನಾಲ್ವರ ವಿರುದ್ಧ ಜಾರಿ ನಿರ್ದೇಶನಾಲಯ ದಿಲ್ಲಿಯಲ್ಲಿ ಪ್ರಕರಣ ದಾಖಲಿಸಿದೆ.

Vijaya Karnataka Web 18 Sep 2018, 3:28 pm
ಹೊಸದಿಲ್ಲಿ: ತೆರಿಗೆ ವಂಚನೆ, ಅಕ್ರಮ ಹಣಕಾಸು ವರ್ಗಾವಣೆ ಮತ್ತು ದಾಖಲೆಗಳಿಲ್ಲದ ಕೋಟ್ಯಂತರ ರೂ. ನಗದು ವಶ ಸಹಿತ ವಿವಿಧ ಹಣಕಾಸು ಅಕ್ರಮ ಪ್ರಕರಣದಲ್ಲಿ ರಾಜ್ಯದ ಸಚಿವ ಡಿ. ಕೆ. ಶಿವಕುಮಾರ್ ಸಹಿತ ನಾಲ್ವರ ವಿರುದ್ಧ ಜಾರಿ ನಿರ್ದೇಶನಾಲಯ ದಿಲ್ಲಿಯಲ್ಲಿ ಪ್ರಕರಣ ದಾಖಲಿಸಿದೆ.
Vijaya Karnataka Web d k shivakumar


ಇಡಿ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭ ಸಚಿವ ಡಿ. ಕೆ. ಶಿವಕುಮಾರ್ ಮತ್ತು ಅವರ ಸಹವರ್ತಿಗಳಿಗೆ ಸೇರಿದ್ದ ದಿಲ್ಲಿಯ ಫ್ಲ್ಯಾಟ್‌ಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು.

ಜತೆಗೆ ಹವಾಲ ಹಣಸಾಗಣೆ, ಬೇನಾಮಿ ಹೆಸರಿನಲ್ಲಿ ತೆರಿಗೆ ವಂಚನೆ ಪ್ರಕರಣ ಕೂಡ ಪತ್ತೆಯಾಗಿತ್ತು. ಈ ಸಂಬಂಧ ರಾಜ್ಯದ ವಿವಿಧೆಡೆ ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಆರೋಪಿ ಡಿಕೆಶಿ ಹೇಳಿಕೆ ದಾಖಲಿಸಲು ಇಡಿ ಸೂಚನೆ ನೀಡಲಿದೆ.

ಡಿಕೆಶಿ ಜತೆಗೆ ಹನುಮಂತಯ್ಯ, ಸಚಿನ್ ನಾರಾಯಣ್ ಮತ್ತು ಎನ್‌. ರಾಜೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ. ಆದಾಯ ತೆರಿಗೆ ಇಲಾಖೆ ಬೆಂಗಳೂರು ವಿಶೇಷ ನ್ಯಾಯಾಲಯದಲ್ಲಿ 2018ರ ಆರಂಭದಲ್ಲಿ ಚಾರ್ಜ್ ಶೀಟ್ ದಾಖಲಿಸಿದ್ದು, ತೆರಿಗೆ ವಂಚನೆ ಮತ್ತು ಬಹುಕೋಟಿ ಹವಾಲ ಜಾಲ ನಡೆಸುತ್ತಿರುವ ಬಗ್ಗೆ ಅದರಲ್ಲಿ ತಿಳಿಸಲಾಗಿತ್ತು. ದೂರಿನ ಅನ್ವಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಹೊಸದಿಲ್ಲಿ ಮತ್ತು ಬೆಂಗಳೂರಿನ ಡಿಕೆಶಿ ನಿವಾಸದ ಮೇಲೆ ದಾಳಿ ನಡೆದ ಸಂದರ್ಭ ದಾಖಲೆಗಳಿಲ್ಲದ 20 ಕೋಟಿ ರೂ. ಪತ್ತೆಯಾಗಿತ್ತು. ಅವು ಸಚಿವ ಡಿಕೆಶಿಗೆ ಸೇರಿದ್ದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ