ಆ್ಯಪ್ನಗರ

ಇಡಿ ಸಮನ್ಸ್‌ ಜಾರಿ: ಬುಧವಾರ ಡಿಕೆಶಿ ಮೇಲ್ಮನವಿ ವಿಚಾರಣೆ

ದಿಲ್ಲಿ ನಿವಾಸದಲ್ಲಿ ಸಿಕ್ಕ 869 ಕೋಟಿ ರೂ...

Vijaya Karnataka 10 Sep 2019, 5:00 am
ಬೆಂಗಳೂರು: ದಿಲ್ಲಿ ನಿವಾಸದಲ್ಲಿ ಸಿಕ್ಕ 8.69 ಕೋಟಿ ರೂ. ಅಕ್ರಮ ಹಣದ ವಿಚಾರದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ರದ್ದುಗೊಳಿಸಲು ನಿರಾಕರಿಸಿದ ಏಕಸದಸ್ಯಪೀಠದ ತೀರ್ಪು ಪ್ರಶ್ನಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೈಕೋರ್ಟ್‌ ವಿಭಾಗೀಯಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
Vijaya Karnataka Web highcourt


ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ಪೀಠದ ಮುಂದೆ ಡಿ.ಕೆ. ಶಿವಕುಮಾರ್‌ ಪರ ವಕೀಲರು ಮೇಲ್ಮನವಿ ವಿಷಯ ಮಂಡಿಸಿದರು.

ಅವರು ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮಾಡಿದ ಮನವಿಗೆ ನ್ಯಾಯಪೀಠ ಸೆ.11ಕ್ಕೆ(ಬುಧವಾರ) ವಿಚಾರಣೆ ನಡೆಸುವುದಾಗಿ ನಿಗದಿಪಡಿಸಿತು.

ಡಿ.ಕೆ. ಶಿವಕುಮಾರ್‌ ಮತ್ತವರ ಆಪ್ತರು ಜಾರಿ ನಿರ್ದೇಶನಾಲಯದ ಸಮನ್ಸ್‌ ರದ್ದು ಕೋರಿದ್ದ ಅರ್ಜಿಯನ್ನು ಹೈಕೋಟ್‌ನ ಏಕಸದಸ್ಯಪೀಠ ಆ.29ರಂದು ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಇಡಿ ಪುನಃ ಸಮನ್ಸ್‌ ನೀಡಿತ್ತು. ವಿಚಾರಣೆಗೆ ಹಾಜರಾದರೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಆ.30ರಂದು ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಅದನ್ನೂ ನ್ಯಾಯಪೀಠ ತಳ್ಳಿ ಹಾಕಿತ್ತು. ಇದೀಗ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲದೆ, ಡಿ.ಕೆ.ಶಿವಕುಮಾರ್‌ ಆಪ್ತರ ಮೇಲ್ಮನವಿ ಆಲಿಸಿದ ವಿಭಾಗೀಯ ಪೀಠ ಅವರನ್ನು ಬಂಧಿಸದಂತೆ ತಾತ್ಕಾಲಿಕ ರಿಲೀಫ್‌ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ