ಆ್ಯಪ್ನಗರ

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ವೇಳೆ ಉಚಿತ ಬಸ್‌ ಪ್ರಯಾಣಕ್ಕೆ ಸುರೇಶ್‌ಕುಮಾರ್‌ ಮನವಿ

ರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳ ಪಾಸ್‌ಗಳಲ್ಲಿ ನಮೂದಿತವಾದ ಮಾರ್ಗಗಳ ಹೊರತಾದ ಸ್ಥಳಗಳಲ್ಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣಕ್ಕೆ ಪ್ರತ್ಯೇಕ ಹಣ ನೀಡಬೇಕಾಗುತ್ತದೆ. ಹಾಗಾಗಿ ಕಾಲೇಜಿನ ಗುರುತಿನ ಚೀಟಿ ತೋರಿಸಿದರೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವಂತೆ ಮನವಿ.

Vijaya Karnataka Web 16 Feb 2020, 9:08 am
ಬೆಂಗಳೂರು: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳು ಮಾರ್ಚ್ ತಿಂಗಳಿಂದ ಆರಂಭಗೊಳ್ಳುತ್ತಿದ್ದು, ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡುವಂತೆ ಸಾರಿಗೆ ಇಲಾಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.
Vijaya Karnataka Web BMTC


ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳು ನಿಗದಿತ ಮಾರ್ಗದಲ್ಲಿಮಾತ್ರ ಸಂಚರಿಸಲು ಅವಕಾಶವಿದೆ. ಆದರೆ, ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳ ಪಾಸ್‌ಗಳಲ್ಲಿ ನಮೂದಿತವಾದ ಮಾರ್ಗಗಳ ಹೊರತಾದ ಸ್ಥಳಗಳಲ್ಲಿ ಇರುತ್ತವೆ. ಆದ್ದರಿಂದ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಇತರೆ ಮಾರ್ಗಗಳಲ್ಲಿ ಸಂಚರಿಸಬೇಕಾಗಿರುತ್ತದೆ. ಹಾಗಾಗಿ, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ತಮ್ಮ ಶಾಲಾ, ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿದರೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಿ ಸುತ್ತೋಲೆ ಹೊರಡಿಸುವಂತೆ ಸಚಿವರು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ