ಆ್ಯಪ್ನಗರ

ಆಯೋಗದ ಪ್ರಚಾರ ಸಾಮಗ್ರಿಗಳ ಬಿಡುಗಡೆಗೊಳಿಸಿದ ಆಯುಕ್ತ

ರಾಜ್ಯ ವಿಧಾನಸಭಾ ಚುನಾವಣೆಗಾಗಿ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಸಿದ್ಧಪಡಿಸಿರುವ ...

Vijaya Karnataka 11 Dec 2022, 6:28 pm
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗಾಗಿ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಸಿದ್ಧಪಡಿಸಿರುವ ಪ್ರಚಾರ ಸಾಮಗ್ರಿಗಳನ್ನು ಮುಖ್ಯಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ಬಿಡುಗಡೆ ಮಾಡಿದರು.
Vijaya Karnataka Web election rawat
Election commission


ಚುನಾವಣಾ ಆಯೋಗ ಕೈಗೊಂಡಿರುವ ಪೂರ್ವಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲು ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಅವರು ಮತದಾನ ಜನಜಾಗೃತಿ ಹಾಗೂ ವಿಶೇಷ ಸೌಲಭ್ಯಗಳ ಕುರಿತು ತಯಾರಿಸಿರುವ ಭಿತ್ತಿ ಚಿತ್ರ ಹಾಗೂ ಕಿರು ಚಿತ್ರಗಳನ್ನು ಬಿಡುಗಡೆ ಮಾಡಿದರು.

ಪಿಂಕ್‌ ಮತಗಟ್ಟೆ

ಮಹಿಳಾ ಮತದಾರರನ್ನು ಪೋ›ತ್ಸಾಹಿಸಲು ರಾಜ್ಯದಲ್ಲಿ ಒಟ್ಟು 450 ಪಿಂಕ್‌ ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಈ ಮತಗಟ್ಟೆಗಳಲ್ಲಿ ಪೊಲೀಸ್‌, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಮಹಿಳೆಯರಾಗಿರುತ್ತಾರೆ.ವಿಶೇಷ ಚೇತನರಲ್ಲಿ ಮತದಾನದ ಬಗ್ಗೆ ಒಲವು ಮೂಡಿಸಲು ಕಿರುಚಿತ್ರ ಮತ್ತು ಪೋಸ್ಟರ್‌ಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.ಕಾಡು ಮತ್ತು ಕಾಡಿನಂಚಿನಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರಿಗಾಗಿ ಈ ಬಾರಿಯ ಚುನಾವಣೆಯಲ್ಲಿ ಅವರಿರುವ ಸ್ಥಳದಲ್ಲಿಯೇ ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ ಎಂದು ರಾವತ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ