ಆ್ಯಪ್ನಗರ

BJP Karnataka: 140 ಕ್ಷೇತ್ರದಲ್ಲಿ ಪ್ರವಾಸ, ಏಳು ಬೃಹತ್ ಸಮಾವೇಶ, ಬಿಜೆಪಿಯಿಂದ ಚುನಾವಣಾ ತಂತ್ರಗಾರಿಕೆ ಫಿಕ್ಸ್

Election preparation by BJP: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಪ್ರತಿತಂತ್ರವಾಗಿ ಬಿಜೆಪಿ ಬಿಜೆಪಿಯೂ 140 ಕ್ಷೇತ್ರಗಳಲ್ಲಿ ಎರಡು ತಂಡಗಳಿಂದ ಪ್ರವಾಸ ಕೈಗೊಂಡಿದೆ. ಒಂದು ತಂಡದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ‌ಯಡಿಯೂರಪ್ಪ ಇರಲಿದ್ದಾರೆ.

ಹೈಲೈಟ್ಸ್‌:

  • ಕಾಂಗ್ರೆಸ್ ತಂತ್ರಕ್ಕೆ ರಾಜ್ಯದಲ್ಲಿ ಬಿಜೆಪಿ ಪ್ರತಿತಂತ್ರ
  • ಅಕ್ಟೊಬರ್ 11 ರಿಂದ ಬಿಜೆಪಿ 140 ಕ್ಷೇತ್ರಗಳಲ್ಲಿ ಪ್ರವಾಸ ಆರಂಭ
  • ಏಳು ಬೃಹತ್ ಸಮಾವೇಶ ಆಯೋಜಿಸಿರುವ ಬಿಜೆಪಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web BJP leaders
ಬೆಂಗಳೂರು : ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ ಹೂಡುತ್ತಿದ್ದು, ಈ ನಿಟ್ಟಿನಲ್ಲಿ 140 ಕ್ಷೇತ್ರದಲ್ಲಿ ರಾಜ್ಯ ನಾಯಕರ ಪ್ರವಾಸ ಹಾಗೂ ಏಳು ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಿದೆ. ಈ ಮೂಲಕ ಚುನಾವಣೆಗೆ ಬಿಜೆಪಿ ಸಜ್ಜುಗೊಳ್ಳುತ್ತಿದೆ.
ಎರಡು ತಂಡಗಳ ಪ್ರವಾಸ
ಚುನಾವಣಾ ದೃಷ್ಟಿಯಿಂದ ಬಿಜೆಪಿ ಎರಡು ತಂಡಗಳಲ್ಲಿ ಪ್ರವಾಸ ಹಮ್ಮಿಕೊಂಡಿದೆ. ಒಂದು ತಂಡದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ‌ಯಡಿಯೂರಪ್ಪ ಇರಲಿದ್ದಾರೆ. 90 ಕ್ಷೇತ್ರಗಳಲ್ಲಿ ಈ‌ ತಂಡ ಪ್ರವಾಸ ಕೈಗೊಳ್ಳಲಿದೆ. ಅಕ್ಟೊಬರ್ 11 ರಿಂದ ಪ್ರವಾಸ ಆರಂಭಗೊಳ್ಳಲಿದ್ದು, ವಾರಕ್ಕೆ ಮೂರು ದಿನಗಳ ಕಾಲ ಪ್ರವಾಸ ನಡೆಯಲಿದೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಸಿದ್ದತೆ: ಸಂಘಟನೆ, ಚುನಾವಣಾ ತಯಾರಿ ಚರ್ಚೆ: ಪ್ರಮುಖರು ಭಾಗಿ

ಕ್ಷೇತ್ರಗಳಲ್ಲಿ ಜಾತಿ ಪ್ರಮುಖರ ಭೇಟಿ, ಮಠ ಹಾಗೂ ಮಂದಿರಗಳ ಭೇಟಿ ಮತ್ತು ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ. ಎರಡನೇ ‌ತಂಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇರಲಿದ್ದಾರೆ. ಇವರಿಬ್ಬರ ತಂಡವೂ 50 ಕ್ಷೇತ್ರಗಳಲ್ಲಿ ಪ್ರವಾಸ ನಡೆಸಲಿದೆ. ನಳಿನ್ ನೇತೃತ್ವದ ಪ್ರವಾಸ ಈಗಾಗಲೇ ಆರಂಭಗೊಂಡಿದೆ. ಎರಡು ಮೂರು ಕ್ಷೇತ್ರಗಳಿಗೆ ನಳಿನ್ ಭೇಟಿಯನ್ನು ನೀಡಿದ್ದಾರೆ. ಡಿಸೆಂಬರ್ 30 ರೊಳಗೆ ಕ್ಷೇತ್ರ ಪ್ರವಾಸ ಮುಕ್ತಾಯಗೊಳ್ಳಲಿದೆ.

ಏಳು ಬೃಹತ್ ಸಮಾವೇಶ

ಚುನಾವಣಾ ದೃಷ್ಟಿಯಿಂದ ರಾಜ್ಯದಲ್ಲಿ ಏಳು ಕಡೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧಾರ ಮಾಡಿದೆ. ಮೈಸೂರಿನಲ್ಲಿ ಎಸ್ ಸಿ ಸಮಾವೇಶ, ಕಲಬುರಗಿಯಲ್ಲಿ ಒಬಿಸಿ, ಹುಬ್ಬಳ್ಳಿಯಲ್ಲಿ ರೈತ ಸಮಾವೇಶ, ಬಳ್ಳಾರಿ‌ಯಲ್ಲಿ ಎಸ್. ಟಿ ಸಮಾವೇಶ,
ಮಂಗಳೂರಿನಲ್ಲಿ ಯುವ ಸಮಾವೇಶ ಹಾಗೂ ಬೆಂಗಳೂರಿನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ.
Bharat Jodo Yatra : ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಠದಂತ ಒಂದು ವ್ಯರ್ಥ ಹಾರಾಟ: ಡಾ. ಕೆ ಸುಧಾಕರ್‌
ಸಮೀಕ್ಷೆ ವರದಿ ಆಧರಿಸಿ ಟಿಕೆಟ್
ಚುನಾವಣೆಯಲ್ಲಿ ಟಿಕೆಟ್ ನೀಡುವ ಸಂದರ್ಭದಲ್ಲಿ ಸಮೀಕ್ಷೆ ವರದಿ ಹಾಗೂ ತಳಮಟ್ಟದ ವರದಿ ‌ಆಧಾರದಲ್ಲಿ ಟಿಕೆಟ್ ಫೈನಲ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಆದರೆ ಕ್ಷೇತ್ರ ಬದಲಾವಣೆ ಮಾಡುವಂತಹ ಯಾವುದೇ ಯೋಜನೆ ವರಿಷ್ಠರಲ್ಲಿ ಇದ್ದಂತಿಲ್ಲ ಎನ್ನುತ್ತಿವೆ ಬಿಜೆಪಿ ಉನ್ನತ ಮೂಲಗಳು.

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಸಿಎಂ ಪ್ರತಿಕ್ರಿಯೆ
ಭಾರತ್ ಜೋಡೋ ಅಭಿಯಾನ ದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸಹಜವಾಗಿ ಎಲ್ಲಾ ಪಕ್ಷದ ಮುಖ್ಯ ಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ ಅರ್ಧ ಕಿ.ಮೀ ನಡೆದು ವಾಪಸ್ಸಾಗಿದ್ದಾರೆ. ಇದ್ಯಾವುದೂ ಪರಿಣಾಮವನ್ನು ಬೀರುವುದಿಲ್ಲ ಎಂದರು. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ, ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ ಎಂದರು.

ಭಾರತ್ ಜೋಡೋ ಅಭಿಯಾನಕ್ಕೂ ಮುನ್ನವೇ ತೀರ್ಮಾನಿಸಿದಂತೆ ಬಿಜೆಪಿ ಏಳು ರ್ಯಾಲಿಗಳನ್ನು ಕೈಗೊಳ್ಳಲಿದೆ. ಮಧ್ಯೆ ಅಧಿವೇಶನ ಹಾಗೂ ದಸರಾ ಇದ್ದುದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಜಂಟಿ ಪ್ರವಾಸವನ್ನು ಪ್ರಾರಂಭ ಮಾಡಲಿದ್ದೇವೆ ಎಂದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ