ಆ್ಯಪ್ನಗರ

ಪರಿಸರದ ಬಗ್ಗೆ ಮಾತನಾಡುತ್ತೇವೆ ಆದ್ರೆ ದನಿಯೆತ್ತುತ್ತಿಲ್ಲ: ಸಿಎಂ ಕುಮಾರಸ್ವಾಮಿ

ಪರಿಸರದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದೇವೆ ಹೊರತು, ಪರಿಸರಕ್ಕೆ ಸಂಬಂಧಿಸಿದ ಅಕ್ರಮಗಳು ಕುರಿತು ಯಾರೂ ದನಿಯೆತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Vijaya Karnataka Web 5 Jun 2018, 2:13 pm
ಬೆಂಗಳೂರು: ಪರಿಸರದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದೇವೆ ಹೊರತು, ಪರಿಸರಕ್ಕೆ ಸಂಬಂಧಿಸಿದ ಅಕ್ರಮಗಳು ಕುರಿತು ಯಾರೂ ದನಿಯೆತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Vijaya Karnataka Web ಪರಿಸರದ ಬಗ್ಗೆ ಮಾತನಾಡುತ್ತೇವೆ ಆದರೆ ದನಿಯೆತ್ತುತ್ತಿಲ್ಲ: ಸಿಎಂ ಕುಮಾರಸ್ವಾಮಿ
ಸಾಂದರ್ಭಿಕ ಚಿತ್ರ


ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರ ಹಾಳಾಗುತ್ತಿದೆ. ಇದರಿಂದ ನಾನಾ ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

1982-83 ರಲ್ಲಿ ಜನ ಸ್ವೆಟರ್ ಹಾಕಿಕೊಂಡು ಜಾಗಿಂಗ್ ಮಾಡುತ್ತಿದ್ದರು. ಆದರೆ, ಈಗ ಆ ಸ್ಥಿತಿ ಇಲ್ಲ. ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಮರ ಕಡಿತ ನಾಶವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಅವರು ಹೇಳಿದರು.

ಪ್ಲಾಸ್ಟಿಕ್ ಬಳಕೆ ತಡೆಯಲು ಶೇ.4ರಷ್ಟು ತೆರಿಗೆ ಹಾಕಲು ಚಿಂತನೆ ನಡೆಸುತ್ತಿದ್ದೇವೆ. ಈ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಜತೆಗೆ ಕಾಗದ, ಬಟ್ಟೆ ಬ್ಯಾಗ್‌ನಂತಹ ಪರಿಸರಸ್ನೇಹಿ ವಸ್ತುಗಳ ಬಳಕೆಗೆ ಉತ್ತೇಜನ ನೀಡಲಾಗುತ್ತದೆ ಎಂದು ತಿಳಿಸಿದರು.

ಅಧಿಕಾರಿಗಳು ಬಾಯಿ ಮಾತಿನಲ್ಲಿ ಗಿಡ ನೆಟ್ಟಿದ್ದೇವೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ