ಆ್ಯಪ್ನಗರ

ಕೊರೊನಾ ಗೆದ್ದ ಸಿದ್ದರಾಮಯ್ಯ ; ಆಸ್ಪತ್ರೆಯಿಂದ ಬಿಡುಗಡೆಯಾಗ್ತಿದ್ದಂತೆ ಎಲ್ಲರಿಗೂ ಧನ್ಯವಾದ ಹೇಳಿದ ಮಾಜಿ ಸಿಎಂ

ತಾನು ಆಸ್ಪತ್ರೆಯಿಂದ ಹೊರಬಂದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವೈದ್ಯರು ಸೇರಿದಂತೆ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಅವರು, ‘ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

Vijaya Karnataka Web 13 Aug 2020, 5:30 pm
ಬೆಂಗಳೂರು: ಕಳೆದ ಕೆಲದಿನಗಳಿಂದ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
Vijaya Karnataka Web Siddaramaiah


'ಗಲಭೆಕೋರರಿಗೆ ಹಿರಿಯರೇ ಬುದ್ಧಿ ಹೇಳಬೇಕಲ್ವಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?: ಸಿದ್ದರಾಮಯ್ಯ

ಕಳೆದ ವಾರ ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಅವರನ್ನು ಮತ್ತೊಮ್ಮೆ ಕೊರೊನಾ ಟೆಸ್ಟ್‌ಗೆ ಒಳಪಡಿಸಿದಾಗ ಅವರಲ್ಲಿ ನೆಗೆಟಿವ್ ಕಾಣಿಸಿಕೊಂಡಿದೆ. ಹೀಗಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ರಾಜಕಾರಣಿಗಳು ಮತ್ತು ಅವರ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಶುಭಹಾರೈಸಿದ್ದರು.

'ನಿಮ್ಮ ಸೇವೆಯ ಮೂಲಕವೇ ನಿಮ್ಮ‌ ಪ್ರೀತಿಯ ಋಣ ತೀರಿಸುತ್ತೇನೆ': ಮಾಜಿ ಸಿಎಂ

ತಾನು ಆಸ್ಪತ್ರೆಯಿಂದ ಹೊರಬಂದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವೈದ್ಯರು ಸೇರಿದಂತೆ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಅವರು, ‘ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.


'ನಳಿನ್ ಕುಮಾರ್ ಅವ್ರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ' : ಸಿದ್ದರಾಮಯ್ಯ

ಅಲ್ಲದೆ ಟ್ವೀಟ್‌ನಲ್ಲಿ ಅವರು, ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ‌ ಪಡೆಯಲಿದ್ದೇನೆ. ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು‌ ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ. ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ