ಆ್ಯಪ್ನಗರ

ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾದ ಡಿಕೆಶಿ, ಮೂರು ದಿನಗಳ ಕಾಲ ಭೇಟಿಗೆ ಅವಕಾಶವಿಲ್ಲ

ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸ ಕಂಡುಬಂದಿದ್ದು, ಸೋಮವಾರ ತಡರಾತ್ರಿ ಅಪೋಲೋ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಹೀಗಾಗಿ ಮೂರು ದಿನಗಳ ಕಾಲ ಡಿಕೆಶಿ ಭೇಟಿಗೆ ಯಾರಿಗೂ ಅವಕಾಶವಿಲ್ಲ .

Vijaya Karnataka Web 12 Nov 2019, 8:09 am
ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ತಡರಾತ್ರಿ ಎದೆನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಅಸ್ಪತ್ರೆಗೆ ಡಿಕೆಶಿ ಅವರನ್ನು ದಾಖಲು ಮಾಡಲಾಗಿದೆ.
Vijaya Karnataka Web D K Shivakumar


ಮುಂದಿನ ಸಿಎಂ ಡಿಕೆಶಿ ಎಂದಾಗ ಜೆಡಿಎಸ್‌ ನಾಯಕರೂ ಜೈ ಎಂದರು!

ಡಿ.ಕೆ. ಶಿವಕುಮಾರ್ ಅವರಿಗೆ ಕಡ್ಡಾಯ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ನೀಡಿರುವುದರಿಂದ ಕನಿಷ್ಟ ಮೂರು ದಿನಗಳ ಕಾಲವಾದರೂ ಯಾರೂ ಅವರ ಭೇಟಿಗೆ ಬರಬಾರದು ಎಂದು ಕುಟುಂಬ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ. ಕಳೆದ ಹತ್ತು ದಿನದ ಹಿಂದೆಯಷ್ಟೇ ಅರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಅವರು ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಾಮುಂಡಿಬೆಟ್ಟದಲ್ಲಿ ಎದುರಾದ ರಾಜಕೀಯ ಧುರೀಣರು: ಡಿಕೆಶಿ-ಜಿಟಿಡಿ ಮಾತು, ಹೆಚ್ಡಿಡಿ ಜತೆ ಮುಗಿಯದ ಮುನಿಸು!

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿ 48 ದಿನಗಳ ಕಾಲ ಇದ್ದ ಡಿಕೆಶಿ ಅಕ್ಟೋಬರ್ 23ರಂದು ಜಾಮೀನಿನ ಮೇಲೆ ಹೊರ ಬಂದಿದ್ದರು. ತಿಹಾರ್ ಜೈಲಿನಲ್ಲಿದ್ದಾಗಲೂ ಅರೋಗ್ಯ ಕೈಕೊಟ್ಟಿದ್ದರಿಂದ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಡಿಕೆಶಿ ಭೇಟಿಯಾದ ರಾಜು ಕಾಗೆ, ಅಶೋಕ್‌ ಪೂಜಾರಿ: ಕುತೂಹಲ ಮೂಡಿಸಿದ ಬಿಜೆಪಿ ನಾಯಕರ ನಡೆ

ಜಾಮೀನು ಸಿಕ್ಕಿ ಮೂರು ದಿನಗಳ ನಂತರ ಅಂದರೆ ಅಕ್ಟೋಬರ್ 26ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳಿಕ ಹಲವು ದೇವಾಲಯ , ಮಠಗಳಿಗೆ ಭೇಟಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ