ಆ್ಯಪ್ನಗರ

ನಾಪತ್ತೆಯಾಗಿದ್ದ ಜನಾರ್ದನ ರೆಡ್ಡಿ ಸಿಸಿಬಿ ಕಚೇರಿಗೆ ಹಾಜರು

ನಾನು ಎಲ್ಲಿಯೂ ಹೋಗಿಲ್ಲ. ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಅಜ್ಞಾತ ಸ್ಥಳದಿಂದ ವೀಡಿಯೋ ಸಂದೇಶ ರವಾನಿಸಿದ್ದ ರೆಡ್ಡಿ, ವಕೀಲ ಚಂದ್ರಶೇಖರ್ ಜತೆ ಸಿಸಿಬಿ ಪೊಲೀಸರ ಮುಂದೆ ಪ್ರತ್ಯಕ್ಷವಾಗಿದ್ದಾರೆ.

Vijaya Karnataka Web 10 Nov 2018, 4:12 pm
ಬೆಂಗಳೂರು: ಡೀಲ್ ಪ್ರಕರಣ ಸಂಬಂಧ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ.
Vijaya Karnataka Web gali


'ನಾನು ಎಲ್ಲಿಯೂ ಹೋಗಿಲ್ಲ. ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಅಜ್ಞಾತ ಸ್ಥಳದಿಂದ ವೀಡಿಯೋ ಸಂದೇಶ ರವಾನಿಸಿದ್ದ ರೆಡ್ಡಿ, ವಕೀಲ ಚಂದ್ರಶೇಖರ್ ಜತೆ ಸಿಸಿಬಿ ಪೊಲೀಸರ ಮುಂದೆ ಪ್ರತ್ಯಕ್ಷವಾಗಿದ್ದಾರೆ.

ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಲ್ಲಿ ದಾಖಲಾಗಿರುವ ಕೇಸ್ ಕ್ಲೋಸ್ ಮಾಡಿಸಿಕೊಡುವುದಾಗಿ 57 ಕೆ.ಜಿ ಚಿನ್ನ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.


ಇದರ ಮಧ್ಯೆ ಹೂಡಿಕೆದಾರರ ಪರವಾಗಿ ಮತ್ತೊಬ್ಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ,''ರೆಡ್ಡಿಗೆ ಜಾಮೀನು ನೀಡಬಾರದು,'' ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ