ಆ್ಯಪ್ನಗರ

ಮತದಾನಕ್ಕೆ ಊರಿಗೆ ಹೋಗುವ ಸೂಕ್ತ ಬಸ್‌ ವ್ಯವಸ್ಥೆ

ತಾಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಗಳಿಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಅಧಿಕ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

Vijaya Karnataka Web 17 Apr 2019, 6:30 am
ಬೆಂಗಳೂರು: ಚುನಾವಣೆ ಕಾರ್ಯಕ್ಕೆ 3300 ಬಸ್‌ಗಳನ್ನು ಒದಗಿಸುತ್ತಿದ್ದು, ಪ್ರಯಾಣಿಕರು ಮತ್ತು ಮತದಾನ ಮಾಡಲು ಊರಿಗೆ ತೆರಳುವವರಿಗೆ ಅನಾನುಕೂಲಕ್ಕೆ ಸಾಕಷ್ಟು ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
Vijaya Karnataka Web ಮತಯಂತ್ರ
ಮತಯಂತ್ರ


''ಪ್ರಯಾಣಿಕರ ದಟ್ಟಣೆ ಇಲ್ಲದ ಮತ್ತು ಅನಿವಾರ್ಯವಲ್ಲದ ಮಾರ್ಗಗಳಲ್ಲಿನ ಬಸ್‌ಗಳನ್ನು ದಟ್ಟಣೆ ಜಾಸ್ತಿರುವ ಇರುವ ಮಾರ್ಗಗಳಿಗೆ ನಿಯೋಜಿಸಲಾಗುವುದು. ತಾಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಗಳಿಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಅಧಿಕ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆಗಳಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ'' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

''ಏ. 17 ಮತ್ತು 18ರಂದು ನಗರದಿಂದ ರಾಜ್ಯದ ನಾನಾ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ 200 ಬಸ್‌ಗಳನ್ನು ಪಡೆದುಕೊಳ್ಳಲಾಗಿದೆ. ಇನ್ನು ಹೆಚ್ಚಿನ ಬಸ್‌ಗಳ ಅವಶ್ಯಕತೆ ಇದ್ದರೆ, ಸೂಕ್ತ ವ್ಯವಸ್ಥೆ ಮಾಡಲಾಗುವುದು'' ಎಂದು ಕೆಎಸ್‌ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ