ಆ್ಯಪ್ನಗರ

ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕು, ಗನ್ ಮ್ಯಾನ್ ಅಮಾನತು

ಶಾಸಕ ತನ್ವೀರ್ ಸೇಠ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದ್ದು, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗನ್ ಮ್ಯಾನ್ ಅನ್ನು ಸಸ್ಪೆಂಡ್ ಮಾಡಲಾಗಿದೆ.

Vijaya Karnataka Web 19 Nov 2019, 12:41 pm
ಬೆಂಗಳೂರು: ಮಾರಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ನರಸಿಂಹ ರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡು ಬಂದಿದ್ದು, ಕೃತಕ ಉಸಿರಾಟಕ್ಕೆ ಅಳವಡಿಸಲಾಗಿದ್ದ ವೆಂಟಿಲೇಟರ್ನ್ನು ತೆಗೆಯಲಾಗಿದೆ.
Vijaya Karnataka Web fairoz khan the gunman of congress mla tanveer sait has been suspended for negligence of duty
ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕು, ಗನ್ ಮ್ಯಾನ್ ಅಮಾನತು


ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ; ಸಿಎಂ ಬಿಎಸ್‌ವೈ ದಿಗ್ಭ್ರಮೆ

ಈ ನಡುವೆ ಶಾಸಕ ತನ್ವೀರ್ ಅವರ ಗನ್ ಮ್ಯಾನ್ ಅನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ತನ್ವೀರ್ ಮೇಲೆ ದಾಳಿ ಮಾಡುವಾಗ ಕರ್ತವ್ಯ ಲೋಪ ಎಸೆಗಿದ್ದಾರೆ ಎಂಬ ಆರೋಪದ ಮೇಲೆ ಗನ್ ಮ್ಯಾನ್ ಫೈರೋಜ್ ಖಾನ್ ಎಂಬವರನ್ನು ಅಮಾನತು ಮಾಡಲಾಗಿದೆ.

ಶಾಸಕ ತನ್ವೀರ್ ಸೇಠ್ ಮೇಲೆ ಬೆಂಬಲಿಗನಿಂದಲೇ ಡೆಡ್ಲಿ ದಾಳಿ?


ಶಾಸಕ ತನ್ವೀರ್ ಸೇಠ್ ಮೇಲೆ ಡೆಡ್ಲಿ ಅಟ್ಯಾಕ್‌

ನವೆಂಬರ್ 17ರಂದು ರಾತ್ರಿ ಮೈಸೂರಿನ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಸೇಠ್ ಮೇಲೆ ಫರಾನ್ ಎಂಬಾತ ಚೂರಿಯಿಂದ ದಾಳಿ ನಡೆಸಿ ಇರಿದಿದ್ದ, ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉದ್ಯೋಗ ಕೊಡಿಸಲಿಲ್ಲವೆಂದು ಶಾಸಕ ತನ್ವೀರ್‌ ಸೇಠ್‌ ಹತ್ಯೆಗೆ ಮುಂದಾದ ಯುವಕ?

ಸದ್ಯ ಚೇತರಿಸಿಕೊಳ್ಳುತ್ತಿದ್ದು, ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕುಗೊಂಡಿದೆ. ಕೊಲೆಗೆ ಯತ್ನ ನಡೆಸಿದ ಆರೋಪಿ ಫರಾನ್ ಗೆ 12 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ