ಆ್ಯಪ್ನಗರ

ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಯತ್ನ : ಹೈಕೋರ್ಟ್‌ ಮೊರೆ ಹೋದ ಬಿಜೆಪಿ ಮುಖಂಡ

ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪೊಲೀಸರು ಯತ್ನ ನಡೆಸಿದ್ದಾರೆಂದು ಆರೋಪಿಸಿ ಸಕಲೇಶಪುರದ ಬಿಜೆಪಿ ಮುಖಂಡ ಸೋಮಶೇಖರ್‌ ಜೈರಾಜ್‌ ಹೈಕೋರ್ಟ್‌ ಮೊರೆ ...

Vijaya Karnataka 11 Oct 2018, 5:00 am
ಬೆಂಗಳೂರು: ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪೊಲೀಸರು ಯತ್ನ ನಡೆಸಿದ್ದಾರೆಂದು ಆರೋಪಿಸಿ ಸಕಲೇಶಪುರದ ಬಿಜೆಪಿ ಮುಖಂಡ ಸೋಮಶೇಖರ್‌ ಜೈರಾಜ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web Somshekhar (BJP) SKP


ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರವನ್ನು ಉರುಳಿಸಲು ತಾವು ಶಾಸಕರನ್ನು ಸೆಳೆಯಲು 'ಆಪರೇಷನ್‌ ಕಮಲ' ನಡೆಸಲು ಯತ್ನಿಸಿದ್ದೇನೆ ಎಂದು ಆರೋಪಿಸಿರುವುದು ಸುಳ್ಳು. ತಾವು ಆ ರೀತಿಯ ಯಾವುದೇ ಕೃತ್ಯಕ್ಕೂ ಕೈ ಹಾಕಿಲ್ಲ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅವರು ಸಲ್ಲಿಸಿರುವ ಅರ್ಜಿ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಬಿ.ವಿ.ಆಚಾರ್ಯ ಅವರ ವಾದವನ್ನು ಕೆಲ ಕಾಲ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಇರುವ ಕೆಲ ಆಕ್ಷೇಪಗಳನ್ನು ಸರಿಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ