ಆ್ಯಪ್ನಗರ

ಅಧಿವೇಶನದ ಮೊದಲ ದಿನದಂದೇ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಸಜ್ಜು!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಾದಾತ್ಮಕ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ರೈತ, ದಲಿತ ಹಾಗೂ ಕಾರ್ಮಿಕ ಪರ ಸಂಘಟನೆಗಳು ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.

Vijaya Karnataka Web 20 Sep 2020, 1:59 pm
ಬೆಂಗಳೂರು: ವಿಧಾನಮಂಡಲ ಮುಂಗಾರು ಅಧಿವೇಶನದ ಮೊದಲ ದಿನದಂದೇ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಸಜ್ಜಾಗಿವೆ. ವಿವಾದಿತ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ಸೋಮವಾರ ರೈತ, ದಲಿತ, ಕಾರ್ಮಿಕ ಸಂಘಟನೆಗಳಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
Vijaya Karnataka Web Farmers protest
ಸಾಂದರ್ಭಿಕ ಚಿತ್ರ


ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಕೈಗಾರಿಕಾ ಕಾನೂನುಗಳ ತಿದ್ದುಪಡಿಗೆ ಜನಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಚರ್ಚೆಗೆ ಸಮಯ ಸಿಗುವುದು ಅನುಮಾನವೆಂದ ಸಿದ್ದರಾಮಯ್ಯ

ಸರ್ಕಾರದ ನಡೆಯನ್ನು ಖಂಡಿಸಿ ಸೋಮವಾರ ಮಧ್ಯಾಹ್ಮ 3 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ರೈತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ನಡೆಯಲಿದೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸ್ವರಾಜ್ ಇಂಡಿಯಾ ಸಂಘಟನೆಯ ಯೋಗೇಂದ್ರ ಯಾದವ್ ಭಾಗಿಯಾಗಲಿದ್ದಾರೆ. ಅಲ್ಲದೆ ಸಾಹಿತಿ ದೇವನೂರು ಮಹಾದೇವ, ಜಸ್ಟೀಸ್ ಎಸ್‌.ಎನ್ ನಾಗಮೋಹನ್ ದಾಸ್ ಸೇರಿದಂತೆ ರೈತ, ಕಾರ್ಮಿಕ, ದಲಿತ ಮುಖಂಡರು ಭಾಗಿಯಾಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ