ಆ್ಯಪ್ನಗರ

ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಮೂಲ ಪತ್ತೆ..! ಸಿಸಿಬಿಯಿಂದ ಯುವತಿ ಸೇರಿ ಇಬ್ಬರು ನೌಕರರ ಬಂಧನ

ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿರುವ ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆಯ ಮೂಲ ಪತ್ತೆಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಕೆಪಿಸಿಸಿ ಕಚೇರಿಯ ಪರೀಕ್ಷಾ ವಿಭಾಗದಿಂದಲೇ ಪ್ರಶ್ನೆಪತ್ರಿಕೆ ಲೀಕ್‌ ಆಗಿರುವುದು ತನಿಖೆಯಿಂದ ಬಯಲಾಗಿದೆ. ಈ ಸಂಬಂಧ ಇಬ್ಬರು ಕೆಪಿಎಸ್‌ಸಿ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 25 Jan 2021, 3:49 pm
ಬೆಂಗಳೂರು: ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆಯ ಮೂಲವನ್ನು ಪತ್ತೆಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಇಬ್ಬರು ನೌಕರರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
Vijaya Karnataka Web arrest repre
ಸಾಂದರ್ಭಿಕ ಚಿತ್ರ


ಕೆಪಿಎಸ್‌ಸಿ ಎಸ್‌ಡಿಎ ರಮೇಶ್ ಹಾಗೂ ಪರೀಕ್ಷೆ ನಿಯಂತ್ರಕರ ವಿಭಾಗದಲ್ಲಿ ಬೆರಳಚ್ಚುಗಾರ್ತಿಯಾಗಿದ್ದ ಸನಾ ಬೇಡಿ ಬಂಧಿತರು. ಇವರೇ ಪ್ರಶ್ನೆಪತ್ರಿಕೆ ಸೋರಿಕೆಯ ಸೂತ್ರಧಾರಿಗಳು ಎಂಬುದು ಸಿಸಿಬಿ ತನಿಖೆಯಿಂದ ಬಯಲಾಗಿದೆ.

ಕೆಪಿಎಸ್‌ಸಿ ಪರೀಕ್ಷೆ‌ ನಿಯಂತ್ರಕರ ವಿಭಾಗದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಸನಾ ಬೇಡಿ ಎಂಬಾಕೆಯೇ ಪ್ರಶ್ನೆಪತ್ರಿಕೆಯನ್ನು ಎಸ್‌ಡಿಎ ರಮೇಶ್‌ಗೆ ನೀಡಿದ್ದಳು. ಬಳಿಕ ಅದೇ ಪ್ರಶ್ನೆಪತ್ರಿಕೆಯನ್ನು ರಮೇಶ್, ವಾಣಿಜ್ಯ ತೆರಿಗೆ ಇಲಾಖೆಯ ಇನ್‌ಸ್ಪೆಕ್ಟರ್ ಚಂದ್ರು ಹಾಗೂ ಇತರಿಗೆ ಮಾರಿದ್ದ. ಅದಾದ ನಂತರ ಅದು ಅಭ್ಯರ್ಥಿಗಳ ಕೈ ಸೇರಿತ್ತು ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.
ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌: KPSC ಕಚೇರಿಯ ನೌಕರ ಸಿಸಿಬಿ ವಶಕ್ಕೆ, 70 ಲಕ್ಷ ಲಂಚ?ಜನವರಿ 24ರಂದು ಎಫ್‌ಡಿಎ ಪರೀಕ್ಷೆ ನಿಗದಿಯಾಗಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಾದ್ದರಿಂದ ಪರೀಕ್ಷೆಯನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿತ್ತು. ಶನಿವಾರವೇ ಪೊಲೀಸರು 6 ಜನರನ್ನು ಬಂಧಿಸಿದ್ದರು. ಅದಾದ ಬಳಿಕ ಮತ್ತೆ 8 ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದರು. ಈಗ ಮತ್ತಿಬ್ಬರು ನೌಕರರ ಬಂಧನದಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿದಂತಾಗಿದೆ.
ನನ್ನ ಮಗನದೇನು ತಪ್ಪಿಲ್ಲ..! ಎಫ್‌ಡಿಎ ಪ್ರಶ್ನೆಪತ್ರಿಕೆ ಲೀಕ್‌ ಆರೋಪಿ ರಮೇಶ್‌ ತಾಯಿ ಶಾಂತಮ್ಮ ಕಣ್ಣೀರುಒಬ್ಬರಿಗೆ 10 ಲಕ್ಷ ರೂಪಾಯಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿತ್ತು. ಆರೋಪಿಗಳಾದ ರಾಚಪ್ಪ ಹಾಗೂ ಚಂದ್ರು ಅವರಿಂದ ರಾಜ್ಯದ ಮೂಲೆ ಮೂಲೆಗೆ ಪ್ರಶ್ನೆಪತ್ರಿಕೆ ತಲುಪಿಸುವ ಪ್ಲಾನ್‌ ಅನ್ನು ರಮೇಶ್‌ ಮಾಡಿದ್ದ ಎನ್ನಲಾಗಿದ್ದು, ಎರಡು ದಿನ ತಲೆಮರೆಸಿಕೊಂಡಿದ್ದ ರಮೇಶ್‌ ಸೋಮವಾರ ಬೆಳಗ್ಗೆ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ