ಆ್ಯಪ್ನಗರ

ಕಾಂಗ್ರೆಸ್‌ ಕೈಗೆ ಮತ್ತೆ ಸಿಗುತ್ತಾ 'ಪವರ್‌'

ಸುಳಿವು ನೀಡಿದ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ

Vijaya Karnataka Web 5 Jun 2018, 2:30 pm
ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಇಂಧನ ಖಾತೆ ಮತ್ತೆ ಕೈ ವಶವಾಗುವ ಸಾಧ್ಯತೆ ಇದೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ಈ ಕುರಿತು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರೇ ಸುಳಿವು ನೀಡಿದ್ದಾರೆ.

ಬೆಂಗಳೂರಿನ ಚೌಡಯ್ಯ ಭವನದಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಮಾತನಾಡಿದರು.


ಇಂಧನ ಖಾತೆ ಕುರಿತು ಎರಡೂ ಪಕ್ಷದಲ್ಲಿ ಚರ್ಚೆ ನಡೆದಿದೆ. ಈ ಕುರಿತು ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದ್ದಾರೆ. ಸಂಜೆ ವಾಪಸಾಗಲಿದ್ದು, ಮುಖಂಡರೊಂದಿಗೆ ಮುಖತಃ ಮಾತನಾಡಿದ ಬಳಿಕ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜೆಡಿಎಸ್ ಪಾಲಾಗಿರುವ ಇಂಧನ ಖಾತೆ ಮತ್ತೆ ಕಾಂಗ್ರೆಸ್‌ ಪಾಲಾಗುವ ಸಾಧ್ಯತೆ ಇದೆ. ಈಗಾಗಲೇ ಎಚ್‌ಡಿ ರೇವಣ್ಣ ಇದರ ಮೇಲೆ ಕಣ್ಣಾಗಿದ್ದರು. ಅಲ್ಲದೇ ಲೋಕೋಪಯೋಗಿ ಕೂಡ ತಮಗೆ ಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ರೇವಣ್ಣಗೆ ಒಂದೇ ಖಾತೆ ನೀಡಲಾಗುವುದು ಎಂದು ಜೆಡಿಎಸ್ ವರಿಷ್ಠರು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇಂಧನ ಖಾತೆ ಕಾಂಗ್ರೆಸ್‌ ಪಾಲಾಗುವ ನಿರೀಕ್ಷೆ ಹೆಚ್ಚಾಗಿದೆ.

ಡಿ.ಕೆ.ಶಿವಕುಮಾರ್ ಮುನಿಸಿನಿಂದಾಗಿ ಇಂಧನ ಖಾತೆಯನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಪಡೆಯಲು ತೆರೆ ಮರೆಯಲ್ಲಿ ರಾಜಕೀಯ ಕಸರತ್ತು ನಡೆದಿದೆ. ಸಂಪುಟ ಸದಸ್ಯರ ಸೇರ್ಪಡೆ ಮುನ್ನ ಇದು ಇತ್ಯರ್ಥ ಆಗುವ ನಿರೀಕ್ಷೆ ಇದೆ.

ರಾತ್ರಿ ವೇಳೆಗೆ ಎಲ್ಲವೂ ನಿರ್ಧಾರವಾಗಲಿದೆ ಎಂದು ಹೊಸದಿಲ್ಲಿಯಲ್ಲಿ ಬೀಡು ಬಿಟ್ಟಿರುವ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ