ಆ್ಯಪ್ನಗರ

ಪೂರ್ತಿ ನೀರಿಗೆ ಹೋರಾಟ ನಿರಂತರ

''ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಸಮಾಧಾನ ತಂದಿದೆ. ನಮ್ಮ ಒಂದು ಹಂತದ ಹೋರಾಟಕ್ಕೆ ಜಯ ಸಕ್ಕಿದ್ದು, ರಾಜ್ಯದ ಬೇಡಿಕೆಯಾದ ಒಟ್ಟು 36.5 ಟಿಎಂಸಿ ನೀರು ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ,'' ಎಂದು ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರೇಶ್‌ ಸೊಬರದಮಠ ಪ್ರತಿಕ್ರಿಯಿಸಿದರು.

Vijaya Karnataka 15 Aug 2018, 7:45 am
ಬೆಂಗಳೂರು: ''ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಸಮಾಧಾನ ತಂದಿದೆ. ನಮ್ಮ ಒಂದು ಹಂತದ ಹೋರಾಟಕ್ಕೆ ಜಯ ಸಕ್ಕಿದ್ದು, ರಾಜ್ಯದ ಬೇಡಿಕೆಯಾದ ಒಟ್ಟು 36.5 ಟಿಎಂಸಿ ನೀರು ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ,'' ಎಂದು ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರೇಶ್‌ ಸೊಬರದಮಠ ಪ್ರತಿಕ್ರಿಯಿಸಿದರು.
Vijaya Karnataka Web mahadayi


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಮ್ಮ ಪಾಲಿನ ಸಂಪೂರ್ಣ ನೀರನ್ನು ಪಡೆಯಲು ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ. ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ರಾಜ್ಯದ ಪರ ವಕೀಲ ಮೋಹನ್‌ ಕಾತರಕಿ ಅವರು ಹೇಳಿದ್ದಾರೆ. ಜತೆಗೆ ನಾವು ಸಹ ಹಲವು ನ್ಯಾಯಾಲಯಕ್ಕೆ ಹಲವು ಪಿಐಎಲ್‌ಗಳನ್ನು ಸಲ್ಲಿಸಿದ್ದೆವು. ಹಾಗಾಗಿ ನಮ್ಮ ವಕೀಲರೊಂದಿಗೆ ಚರ್ಚಿಸಿ ಮುಂದುವರೆಯುತ್ತೇವೆ,'' ಎಂದರು. ''ಬುಧವಾರ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸರಕಾರ ಕೂಡಲೇ ಈ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಅಗತ್ಯ ಯೋಜನೆ ರೂಪಿಸಿ, ಕಾರ್ಯರೂಪಕ್ಕೆ ತರುವಂತೆ ಮನವಿ ಮಾಡುತ್ತೇವೆ. ನಂತರ ನಮ್ಮ ಕ್ಷೇತ್ರಕ್ಕೆ ತೆರಳಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ'' ಎಂದು ನುಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ