ಆ್ಯಪ್ನಗರ

ತೇಜಸ್ವಿ ಸೂರ್ಯ, ಶಾಸಕರ ವಿರುದ್ಧ ಕೇಸ್ ದಾಖಲಿಸಿ - ಕಮಲ್ ಪಂತ್‌ಗೆ ಕಾಂಗ್ರೆಸ್‌ನಿಂದ ಮನವಿ

ಬೆಂಗಳೂರು ಸೌತ್ ಝೋನ್‌ ವಾರ್‌ ರೂಂನಲ್ಲಿ ಬೆಡ್‌ ಹಗರಣ ನಡೆಯುತ್ತಿರುವುದನ್ನು ಬಯಲಿಗೆಳೆದಿದ್ದ ತೇಜಸ್ವಿ ಸೂರ್ಯ ಈ ಸಂದರ್ಭದಲ್ಲಿ ಅಲ್ಲಿದ್ದ ಒಂದು ಕೋಮಿನ ಸಿಬ್ಬಂದಿ ಹೆಸರನ್ನು ಓದಿ ಹೇಳಿದ್ದರು. ಶಾಸಕರು ಇಲ್ಲಿ ಮದರಸಾ ನಡೆಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದರು. ಇದರ ವಿರುದ್ಧ ಕಾಂಗ್ರೆಸ್‌ ದೂರು ನೀಡಿದೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka 7 May 2021, 7:42 pm

ಹೈಲೈಟ್ಸ್‌:

  • ಬೆಂಗಳೂರು ಸೌತ್ ಝೋನ್‌ ವಾರ್‌ ರೂಂನಲ್ಲಿ ಬೆಡ್‌ ಹಗರಣ ನಡೆಯುತ್ತಿರುವುದನ್ನು ಬಯಲಿಗೆಳೆದಿದ್ದ ತೇಜಸ್ವಿ ಸೂರ್ಯ ಈ ಸಂದರ್ಭದಲ್ಲಿ ಅಲ್ಲಿದ್ದ ಒಂದು ಕೋಮಿನ ಸಿಬ್ಬಂದಿ ಹೆಸರನ್ನು ಓದಿ ಹೇಳಿದ್ದ ತೇಜಸ್ವಿ ಸೂರ್ಯ
  • ಸಂಸದರ ಜತೆಗಿದ್ದ ಶಾಸಕರು ಇಲ್ಲಿ ಮದರಸಾ ನಡೆಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದರು
  • ಇದರ ವಿರುದ್ಧ ಕಾಂಗ್ರೆಸ್‌ ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರಿಗೆ ದೂರು ನೀಡಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Congress Kamal Panth
ಬೆಂಗಳೂರು: ಬೆಡ್‌ ಬ್ಲಾಕಿಂಗ್ ದಂಧೆ ಬಯಲಿಗೆಳೆಯುವ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ಒಂದು ಕೋಮಿನವರ ಮೇಲೆ ಆಪಾದನೆ ಹೊರಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರ ನಿಯೋಗ ಶುಕ್ರವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿ ಸಂಸದರ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದೆ
ಬೆಂಗಳೂರು ಸೌತ್ ಝೋನ್‌ ವಾರ್‌ ರೂಂನಲ್ಲಿ ಬೆಡ್‌ ಹಗರಣ ನಡೆಯುತ್ತಿರುವುದನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಒಂದು ಕೋಮಿನ ಸಿಬ್ಬಂದಿ ಹೆಸರನ್ನು ಓದಿ ಹೇಳಿದ್ದರು. ಈ ನಡುವೆ ಸಂಸದರ ಜೊತೆಗಿದ್ದ ಶಾಸಕರು ಇಲ್ಲಿ ಮದರಸಾ ನಡೆಸುತ್ತಿದ್ದೀರಾ ಎಂದು ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರಲ್ಲಿ ಪ್ರಶ್ನಿಸಿದ್ದರು.

ಸಂಸದರು ಹಾಗೂ ಶಾಸಕರ ಈ ನಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಶಾಸಕ ಜಮೀರ್ ಅಹ್ಮದ್ ಖಾನ್‌ ಪತ್ರಿಕಾಗೋಷ್ಠಿ ನಡೆಸಿ ತೇಜಸ್ವಿ ಸೂರ್ಯ ಹಾಗೂ ಶಾಸಕರ ನಡೆಯನ್ನು ಖಂಡಿಸಿದ್ದರು.

ಇದೀಗ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಜ್ಯ ಸಭಾ ಸದಸ್ಯರಾದ ನಾಸಿರ್ ಹುಸೇನ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮ್ಮದ್ ಖಾನ್, ವಿಧಾನ ಪರಿಷತ್ ಸದಸ್ಯರಾದ ನಝೀರ್ ಅಹ್ಮದ್, ಶಾಸಕರಾದ ಎನ್.ಎ ಹ್ಯಾರಿಸ್, ರಿಜ್ವಾನ್ ಅರ್ಷದ್ ಮತ್ತಿತರರು ಉಪಸ್ಥಿತರಿದ್ದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ