ಆ್ಯಪ್ನಗರ

ದೀಪಾವಳಿಗಿಲ್ಲ ಪಟಾಕಿ ಸದ್ದು! ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ

ಕೋವಿಡ್‌ ಸೋಂಕಿತರ ಆರೋಗ್ಯದ ದೃಷ್ಟಿಯಲ್ಲಿ ಈ ಬಾರಿಯ ದೀಪಾವಳಿಗೆ ಪಟಾಕಿ ನಿಷೇಧ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಪಟಾಕಿ ನಿಷೇಧದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳಲಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

Vijaya Karnataka Web 6 Nov 2020, 1:25 pm
ಬೆಂಗಳೂರು: ಕೋವಿಡ್‌ ಕಾರಣಕ್ಕಾಗಿ ಈ ಬಾರಿಯ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತರಾಗಿ ಅಧಿಕೃತ ಆದೇಶವನ್ನು ಹೊರಡಿಸಲಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
Vijaya Karnataka Web firecracker


ಕೋವಿಡ್‌ ಸೋಂಕಿತರ ಆರೋಗ್ಯ ದೃಷ್ಟಿಯಲ್ಲಿ ತಜ್ಞರು ನೀಡಿದ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂತಹದೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಾಗಿ ಮಾತನಾಡಿದ ಸಿಎಂ ಬಿಎಸ್‌ ಯಡಿಯೂರಪ್ಪ, ಪಟಾಕಿ ನಿಷೇಧದ ಬಗ್ಗೆ ಚರ್ಚೆಯಾಗಿದೆ ಶೀಘ್ರದಲ್ಲೇ ನೋಟಿಫಿಕೆಷನ್ ಹೊರಡಿಸುತ್ತೇವೆ ಎಂದರು.

ಕೊರೊನಾ ಇಳಿಕೆ, ಹೆಚ್ಚಿದ ಮದುವೆ ಸಂಭ್ರಮ: ಚೇತರಿಕೆಯತ್ತ ಕಲ್ಯಾಣ ಮಂಟಪ

ಕೋವಿಡ್‌ ಕಾರಣದಿಂದಾಗಿ ರಾಜಸ್ಥಾನದಲ್ಲಿ ಈಗಾಗಲೇ ಪಟಾಕಿ ನಿಷೇಧ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ಸರ್ಕಾರ ಕಡಿಮೆ ಮಾಲಿನ್ಯ ಉಂಟುಮಾಡುವ ಪಟಾಕಿಗಳನ್ನಷ್ಟೇ ಉಪಯೋಗ ಮಾಡಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಪಟಾಕಿ ನಿಷೇಧದ ಕುರಿತಾಗಿ ತಜ್ಞರು ಸಲಹೆ ನೀಡಿದ್ದರು.

ಹೋಂ ಐಸೋಲೇಷನ್‌ನಲ್ಲಿರುವ ಕೋವಿಡ್‌ ರೋಗಿಗಳಿಗೆ ಪಟಾಕಿ ಹೊಗೆಯಿಂದ ಹಾಗೂ ಅದು ಸೃಷ್ಟಿಸುವ ವಾಯು ಮಾಲಿನ್ಯದಿಂದ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಜ್ಞ ವೈದ್ಯರು ಪಟಾಕಿ ನಿಷೇಧಿಸುವಂತೆ ಸಲಹೆ ನೀಡಿದ್ದರು. ತಜ್ಞರ ಸಲಹೆಗೆ ಒಪ್ಪಿಗೆ ಸೂಚಿಸಿದ ಸರ್ಕಾರ ಇದೀಗ ಪಟಾಕಿ ನಿಷೇಧ ಮಾಡಿದೆ. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳಲಿದೆ.

ಪಟಾಕಿ ನಿಷೇಧಕ್ಕೆ ಪರ -ವಿರೋಧ ಅಭಿಪ್ರಾಯ

ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿರುವ ನಿರ್ಧಾರಕ್ಕೆ ಪರ ಹಾಗೂ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೆ ಸಂಪ್ರದಾಯವಾದಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ. ಪಟಾಕಿ ಸಿಡಿಸುವುದರಿಂದ ಪರಿಸರ ಹಾನಿ ಆಗುತ್ತದೆ ಎಂದರೆ ಪರಿಸರಕ್ಕೆ ಹಾನಿಯಾಗುವ ಎಲ್ಲವನ್ನೂ ನಿಷೇಧ ಮಾಡಿ ಎಂಬುವುದು ಸಂಪ್ರದಾಯವಾದಿಗಳ ವಾದವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ