ಬೆಂಗಳೂರು: ಪಂಚಮಸಾಲಿ ಸಮುದಾಯದ ಐದು ಜನರಿಗೆ ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿ ಆಗ್ರಹಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪಂಚಮಸಾಲಿ ಸಮುದಾಯದ ಶಾಸಕರ ಅಭಿನಂದನಾ ಸಮಾರಂಭ ಕಾರ್ಯಕ್ರಮದ ವಿಚಾರವಾಗಿ ಮಾತನಾಡಿದ ಅವರು, " ಪಂಚಮಸಾಲಿ ಲಿಂಗಾಯತ ಸಮುದಾಯದಿಂದ 20 ಶಾಸಕರು ಈ ಬಾರಿ ಜಯ ಸಾಧಿಸಿದ್ದಾರೆ. ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ, ವಿಜಯಾನಂದ್ ಕಾಶಾಪ್ಪನವರ ಅವರಿಗೆ ಅಭಿನಂದನೆ ಸಲ್ಲಿಸಬೇಕಾಗಿದೆ ಎಂದರು.
ವೀರೇಂದ್ರ ಪಾಟೀಲರ ನಂತರ ಸದ್ಯ ಕಾಂಗ್ರೆಸ್ಗೆ ಬೆಂಬಲ
ವೀರೇಂದ್ರ ಪಾಟೀಲ್ ನಂತರ ಪಂಚಮಸಾಲಿ ಸಮುದಾಯ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದೆ. ಮೀಸಲಾತಿ ಹೋರಾಟ ಕಾರಣ ಇಷ್ಟು ಪ್ರಾತಿನಿದ್ಯ ದೊರಕಿದೆ.ಯಾರು ಸಮಾಜಕ್ಕೆ ದುಡಿದಂತ ವ್ಯಕ್ತಿಗಳಿಗೆ ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದರು.
ಪಂಚಮಸಾಲಿ ಲಿಂಗಾಯತ ಸಮುದಾಯದ ಐದು ಜನರಿಗೆ ಸಚಿವ ಸ್ಥಾನ ನೀಡಬೇಕು - ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ
Jayamruthyunjaya Swamiji Demand Minister Post For Lingayat MLA : ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಐದು ಸ್ಥಾನಗಳನ್ನು ನೀಡಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯ ಚುನಾವಣೆಯಲ್ಲಿ ಆಯ್ಕೆಯಾದ 20 ಲಿಂಗಾಯತ ಶಾಸಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Authored byಇರ್ಷಾದ್ ಉಪ್ಪಿನಂಗಡಿ | Edited by ಜಯಪ್ರಕಾಶ್ ಬಿರಾದಾರ್ | Vijaya Karnataka Web 23 May 2023, 7:04 pm
ಹೈಲೈಟ್ಸ್:
- ಪಂಚಮಸಾಲಿ ಸಮುದಾಯದ ಐದು ಜನರಿಗೆ ಸಚಿವ ಸ್ಥಾನಗಳನ್ನು ನೀಡಬೇಕೆಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ.
- ಪಂಚಮಸಾಲಿ ಲಿಂಗಾಯತ ಸಮುದಾಯದಿಂದ 20 ಶಾಸಕರು ಈ ಬಾರಿ ಜಯ ಸಾಧಿಸಿದ್ದಾರೆ. ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ, ವಿಜಯಾನಂದ್ ಕಾಶಾಪ್ಪನವರಿಗೆ ಸಚಿವ ಸ್ಥಾನ ನೀಡಿ ಎಂದ ಸ್ವಾಮೀಜಿ.
- ಲಿಂಗಾಯತ ಶಾಸಕರಿಗೆ ಜೂನ್ ತಿಂಗಳಲ್ಲಿ ಸಿಎಂ -ಡಿಸಿಎಂ ನೇತೃತ್ವದಲ್ಲಿ ಕೂಡಲಸಂಗಮದಲ್ಲಿ ಅಭಿನಂದನೆ ಸಮಾರಂಭ ಆಯೋಜನೆ.