ಆ್ಯಪ್ನಗರ

ಈದ್ ಮಿಲಾದ್ ಹಬ್ಬ ಆಚರಿಸಿ ಆದ್ರೆ ಕೋವಿಡ್‌ ಮಾರ್ಗಸೂಚಿ ಪಾಲಿಸಿ, ವಕ್ಫ್ ಇಲಾಖೆ ಮನವಿ

ಮುಸ್ಲಿಮರು ಪ್ರವಾದಿ ಮುಹಮ್ಮದರ ಜನ್ಮದಿನವಾದ ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ವಕ್ಫ್ ಇಲಾಖೆ ಮನವಿ ಮಾಡಿದೆ.

Vijaya Karnataka Web 26 Oct 2020, 3:55 pm
ಬೆಂಗಳೂರು: ಕೋವಿಡ್-19 ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಅಕ್ಟೋಬರ್‌ 30 ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಮಾಡುವಂತೆ ವಕ್ಫ್ ಇಲಾಖೆ ಮನವಿ ಮಾಡಿದೆ.
Vijaya Karnataka Web Eid-e-Milad mumbai rep


ರಾಜ್ಯ ಸರ್ಕಾರ ನೀಡಿರುವ ಆದೇಶಗಳಂತೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮಾರ್ಗಸೂಚಿಗಳನ್ವಯ ಆಚರಣೆ ಮಾಡಬೇಕೆಂದು ಬೆಂಗಳೂರು ನಗರ ಉತ್ತರ ಜಿಲ್ಲೆಯ ವಕ್ಫ್ ಅಧಿಕಾರಿಯಾದ ರಝಿಯಾ ಸುಲ್ತಾನಾರವರು ಕೋರಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲ ಮಸೀದಿಗಳು ಹಾಗೂ ವಕ್ಫ್ ಸಂಸ್ಥೆಗಳ ಆಡಳಿತ ಸಮಿತಿಗಳ ಅಧ್ಯಕ್ಷರು/ಕಾರ್ಯದರ್ಶಿ/ಮುತವಲ್ಲಿ/ ಆಡಳಿತಾಧಿಕಾರಿಗಳು ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಇರುವ ಸರ್ಕಾರದ ಆದೇಶ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

ಕಲಬುರಗಿ: ರಾಜ್ಯದ ಹಲವೆಡೆ ಪ್ರವಾಹ ಹಿನ್ನೆಲೆ ವಿಶೇಷ ಅಧಿವೇಶನ ಕರೆಯಲು ಸಿದ್ದರಾಮಯ್ಯ ಒತ್ತಾಯ

ರಾಜ್ಯಾದ್ಯಂತ ದಿನಾಂಕ 30-10-2020 ರಂದು ಆಚರಿಸಲಿರುವ ಈ ಬಾರಿಯ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೆರವೇರಲಿರುವ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ ಜುಲೂಸ್, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗೂ ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19 ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಮೂಲಕ ದೈಹಿಕ ಅಂತರ ಕಾಪಾಡಿಕೊಂಡು ನೆರವೇರಿಸುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಡಿಜಿಟಲ್ ಸೌಂಡ್ ಸಿಸ್ಟಮ್ ಡಿಜೆ ಬಳಕೆಯನ್ನು ನಿಷೇಧಿಸಲಾಗಿದೆ.

ರಾಜ್ಯದಲ್ಲೂ ಸರ್ವರಿಗೂ ಉಚಿತ ಕೊರೊನಾ ಲಸಿಕೆ..? ಶೀಘ್ರ ತೀರ್ಮಾನ ಎಂದ ಅಶ್ವತ್ಥ ನಾರಾಯಣ

ಮುಖಗವಸು ಮಾಸ್ಕ್ ಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಹತ್ತು ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಹಬ್ಬವನ್ನು ಆಚರಿಸುವುದು. ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈತೊಳೆಯಲು ಸೂಕ್ತ ವ್ಯವಸ್ಥೆಯನ್ನು ಮಾಡುವುದು ಕಡ್ಡಾಯವಾಗಿ ಎಲ್ಲರೂ 6 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು. ಖಬರಸ್ಥಾನ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಪ್ರಾರ್ಥನೆ ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದೆ.

ಸರ್ಕಾರದ ಸುತ್ತೋಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅನುಸರಿಸುವುದು. ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ