ಆ್ಯಪ್ನಗರ

ಆಪರೇಷನ್‌ ಕಮಲಕ್ಕೆ ಪ್ರತಿಯಾಗಿ ಆಪರೇಷನ್‌ ಹಸ್ತ: ಪ್ರಿಯಾಂಕ್‌ ಖರ್ಗೆ

ಆಪರೇಷನ್‌ ಕಮಲಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕೂಡ ಪರಿಣಾಮಕಾರಿ ಉಪ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಬಿಜೆಪಿ ಶಾಸಕರನ್ನು ನಾವು ಸೆಳೆಯುತ್ತೇವೆ ಎನ್ನುವ ಧಾಟಿಯಲ್ಲಿ ಮಾತನಾಡಿದ್ದಾರೆ ಪ್ರಿಯಾಂಕ್‌ ಖರ್ಗೆ

Vijaya Karnataka Web 1 Jul 2019, 5:01 pm
ಕಲಬುರಗಿ: ಬಿಜೆಪಿಯವರು ಆಪರೇಷನ್‌ ಕಮಲ ಮಾಡಿದರೆ, ನಾವು ಆಪರೇಷನ್‌ ಹಸ್ತ ಮಾಡುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
Vijaya Karnataka Web ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ


ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಪ್ರಿಯಾಂಕ್ ಖರ್ಗೆ ಮಾತನಾಡಿದರು.

ವಿಜಯ ನಗರ ಶಾಸಕ ಆನಂದ್‌ ಸಿಂಗ್ ರಾಜೀನಾಮೆ ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್‌ ಖರ್ಗೆ, ಜಿಂದಾಲ್‌ ವಿಚಾರ ಇದ್ದರೆ ಕುಳಿತುಕೊಂಡು ಚರ್ಚಿಸಬಹುದಿತ್ತು. ಜಿಂದಾಲ್‌ಗೆ ಭೂಮಿ ನೀಡುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದರು.

ಯಾವುದೇ ಕಂಪನಿಗೆ ಭೂಮಿ ಕೊಡಬೇಕಾದರೆ ನಿಯಮಾವಳಿ ಇರುತ್ತದೆ. ಈ ಬಗ್ಗೆ ಕ್ಯಾಬಿನೆಟ್‌ ಸಬ್‌ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಜಿಂದಾಲ್‌ಗೆ ಭೂಮಿ ಪರಭಾರ ವಿಚಾರದಲ್ಲಿ ಗೊಂದಲ ಇದ್ದರೆ ನಾನು ಆನಂದ್‌ ಸಿಂಗ್‌ ಜತೆ ಮಾತನಾಡುತ್ತೇನೆ ಎಂದರು.

ಜಿಂದಾಲ್‌ ವಿಚಾರವಾಗಿ ಆನಂದ್‌ ಸಿಂಗ್‌ ರಾಜೀನಾಮೆ ನೀಡಿಲ್ಲ ಎನಿಸುತ್ತದೆ. ಆಪರೇಷನ್‌ ಕಮಪ ನಡೆಯುತ್ತಿದೆ ಎನ್ನುವುದಕ್ಕೆ ನಮ್ಮ ಜಿಲ್ಲೆಯಲ್ಲಿಯೇ ಉದಾಹರಣೆ ಇದೆ ಎಂದು ಸಚಿವರು ತಿಳಿಸಿದರು.

ಅವರು ಆಪರೇಷನ್‌ ಕಮಲ ಮಾಡಿದರೆ ನಾವು ಆಪರೇಷನ್‌ ಹಸ್ತ ಮಾಡುವುದಕ್ಕೆ ಸೈ ಎಂದು ಖರ್ಗೆ ಸವಾಲು ಹಾಕಿದರು.

ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ ಎನ್ನುವುದು ಊಹಾಪೋಹ. ಜೆಡಿಎಸ್ ಪಕ್ಷ ಸಂಘಟನೆಗಾಗಿ ದೇವೇಗೌಡರು ಪಾದಯಾತ್ರೆ ಮಾಡ್ತಿದಾರೆ, ಅದರಲ್ಲೇನು ತಪ್ಪಿದೆ ಎಂದು ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ